ವಿಟ್ಲ: ಕೇಪು ಗ್ರಾಮದ ಮೈರ ಎಂಬಲ್ಲಿ  ಲಾರಿ ಒರೆಸಿಕೊಂಡು ಹೋದ ವಿಚಾರದಲ್ಲಿ ಎರಡು ಕೋಮಿಗೆ ಸೇರಿದ ಯುವಕರ ನಡುವೆ ಘರ್ಷಣೆ ವೇಳೆ   ತಲವಾರು ಹಾಗೂ ರಾಡ್‌ನಿಂದ ಹಲ್ಲೆ ನಡೆಸಿ  ಪ್ರಕರಣಕ್ಕೆ ಸಂಬಂಧಿಸಿ ಮತ್ತಡ ಇಬ್ಬರು ಆರೋಪಿಗಳನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಉಕ್ಕುಡ ದರ್ಬೆ ನಿವಾಸಿ ಅಬ್ದುಲ್ ಸಲಂ(23) ಹಾಗೂ ಅಯೂಬ್ (24) ಬಂಧಿತ ಆರೋಪಿಗಳು.

ಕೊಡಗು ಜಿಲ್ಲೆಯ ಮಹಮ್ಮದ್ ಶರೀಫ್, ಉಕ್ಕುಡ ದರ್ಬೆ ನಿವಾಸಿ ಸಾದಿಕ್ ಎಂಬವರನ್ನು ಈ ಹಿಂದೆ ಬಂಧಿಸಲಾಗಿತ್ತು.

ರಕ್ಷಿತ್ ಎಂಬವರು ಬೈಕ್ ನಲ್ಲಿ ಅಡ್ಯನಡ್ಕದಿಂದ ಮೈರದಲ್ಲಿರುವ ತನ್ನ ಮನೆಗೆ ಹೋಗುವ ಸಂದರ್ಭ ಮೈರ, ಕರವೀರ ಬಸ್ ಸ್ಟಾಂಡ್ ಬಳಿ ರಕ್ಷಿತ್ ಎಂಬವರಿಗೆ ತಲವಾರು ಮತ್ತು ರಾಡ್ ಗಳಿಂದ ಹಲ್ಲೆ ನಡೆಸಿ ಆರೋಪಿಗಳು ಪರಾರಿಯಾಗಿದ್ದರು. ಈ ಬಗ್ಗೆ ಅಕ್ರ: ನಂಬ್ರ: 75/2022 ಕಲಂ: 504, 324, 143, 147, 148, 307 ಜೊತೆಗೆ 149 ಬಾಧಂಸಂ’ರಂತೆ ಪ್ರಕರಣ ದಾಖಲಾಗಿತ್ತು. ಇದೀಗ ತಲೆ ಮರೆಸಿಕೊಂಡಿದ್ದ ಉಳಿದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ವಿಟ್ಲ ಪೊಲೀಸರು ಯಶಸ್ವಿಯಾಗಿದ್ದಾರೆ.

Leave a Reply

Your email address will not be published. Required fields are marked *

error: Content is protected !!