ಬಂಟ್ವಾಳ: ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಮುಂಬಾಗಿಲನ್ನು ಒಡೆದು ಒಳ ನುಗ್ಗಿದ ಖದೀಮರು ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ತಾಲೂಕಿನ ಮಣಿನಾಲ್ಕೂರು ಎಂಬಲ್ಲಿಂದ ವರದಿಯಾಗಿದೆ.
ಮಣಿನಾಲ್ಕೂರು ಗ್ರಾಮದ ನೇಲ್ಯಪಲ್ಕೆ ನಿವಾಸಿ ಕರಿಯ ಮೂಲ್ಯ ಅವರ ಮನೆಯಿಂದ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ಕಳವಾಗಿದೆ.
ಡಿಸೆಂಬರ್ ತಿಂಗಳಲ್ಲಿ ನಡೆಯಲಿರುವ ಮಗಳು ಶ್ವೇತಾಳ ಮದುವೆ ಸಮಾರಂಭದ ಹಿನ್ನೆಲೆ ಸುಮಾರು 2.50. ಲಕ್ಷ ಮೌಲ್ಯದ ಒಂಬತ್ತು ಪವನ್ ಚಿನ್ನಾಭರಣ ಖರೀಧಿಸಿ ಮನೆಯಲ್ಲಿರಿಸಲಾಗಿತ್ತು.
ಮೇ 22ರ ರವಿವಾರ ಬೆಳಿಗ್ಗೆ 9 ಗಂಟೆ ವೇಳೆಗೆ ಮನೆ ಮಂದಿ ಮನೆಗೆ ಬೀಗ ಹಾಕಿ ಸಂಬಂಧಿಕರ ಮನೆಗೆ ತೆರಳಿದ್ದರು. ಕರಿಯ ಮೂಲ್ಯ ಅವರ ಕುಟುಂಬ ಸೋಮವಾರ ಸಂಜೆ ಮನೆಗೆ ಮರಳಿದ ಸಂದರ್ಭದಲ್ಲಿ ಘಟನೆ ಬೆಳಕಿಗೆ ಬಂದಿದೆ.
ಮನೆಯೊಳಗೆ ಹೋಗಿ ನೋಡಿದಾಗ ಕಪಾಟಿನ ಬೀಗ ಮುರಿದು ಅದರಲ್ಲಿ ಇರಿಸಿದ್ದಚಿನ್ನ ಕಳವು ಮಾಡಿರುವುದು ತಿಳಿದಿದೆ. ಈ ಬಗ್ಗೆ ತಿಳಿದು ಬಂಟ್ವಾಳ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದಾರೆ.
ಘಟನಾ ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್, ಎಸ್.ಐ.ಹರೀಶ್ ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.