ಮಂಗಳೂರು: ಮಂಗಳೂರಿನ ವಿವಿ ಕಾಲೇಜಿನಲ್ಲಿ ಹಿಜಾಬ್ ವಿವಾದ ಆರಂಭವಾಗಿದೆ, ಕಾಲೇಜಿನಲ್ಲಿ ಕೆಲವು ವಿದ್ಯಾರ್ಥಿಗಳು ಹಿಜಾಬ್ ಧರಿಸುತ್ತಿದ್ದಾರೆ ಎಂದು ಆರೋಪಿಸಿ ಎಬಿವಿಪಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದೆ.
ಮಂಗಳೂರಿನ ಹಂಪನಕಟ್ಟೆಯಲ್ಲಿರುವ ಕಾಲೇಜಿನಲ್ಲಿ ತರಗತಿಯನ್ನು ಬಹಿಷ್ಕರಿಸಿ ವಿದ್ಯಾರ್ಥಿಗಳು ಹಿಜಾಬ್ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಹಿಜಾಬ್ ಹಾಕಲು ಕೆಲ ವಿದ್ಯಾರ್ಥಿನಿಯರಿಗೆ ಅವಕಾಶ ನೀಡಲಾಗಿದೆ ಆಗಿದ್ದರೆ ನಮಗೂ ಕೇಸರಿ ಶಾಲು ಹಾಕಲು ಅವಕಾಶ ನೀಡಿ ಎಂದು ಆಗ್ರಹಿಸಿದ್ದಾರೆ. ಮಾದ್ಯಮದ ಜೊತೆ ಮಾತನಾಡಿದ ಪ್ರತಿಭಟನಾನಿರತ ವಿದ್ಯಾರ್ಥಿಗಳು ಇತ್ತೀಚಿಗೆ ಆಡಳಿತ ಮಂಡಳಿ ಮೀಟಿಂಗ್ ನಲ್ಲಿ ಹಿಜಾಬ್ ಹಾಕಬಾರದು ಎಂದು ನಿರ್ಧರಿಸಲಾಗುತ್ತು, ಆದರೆ ಅದನ್ನು ಲೆಕ್ಕಿಸದೆ ಹಿಜಾಬ್ ಧರಿಸಿಕೊಂಡೂ ಬರುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.