ಹುಬ್ಬಳ್ಳಿ: ಹುಬ್ಬಳ್ಳಿಯ ತಾರಿಹಾಳ ಬಳಿಯ ಬೈಪಾಸ್‌ನಲ್ಲಿ ಅಪಘಾತ ಸಂಭವಿಸಿ ವಾರದ ಹಿಂದೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಮೃತಪಟ್ಟಿದ್ದಾರೆ. 

ಬುಲೇರೊ ಕಾರ್ ಮತ್ತು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಯುವಕ ಆನಂದ ಮಾದರ (27) ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಹುಬ್ಬಳ್ಳಿ ತಾಲೂಕಿನ ಚಳಮಟ್ಟಿ ಗ್ರಾಮದ ನಿವಾಸಿಯಾಗಿರುವ ಆನಂದ ಕಳೆದ ಮೇ 20 ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಈ ಕುರಿತು ಹುಬ್ಬಳ್ಳಿಯ ಉತ್ತರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Leave a Reply

Your email address will not be published. Required fields are marked *

error: Content is protected !!