ಮಂಗಳೂರು : ಸರ್ಕಾರದ ಜನಪರ ಯೋಜನೆಗಳನ್ನು ತಳಮಟದಲ್ಲಿ ಜನಸಾಮಾನರಿಗೆ ನೇರವಾಗಿ ಒದಗಿಸಬೇಕೆಂಬ ಸರ್ಕಾರದ ಆಶಯದಂತೆ ಜಿಲ್ಲೆಯ ಎಲ್ಲಾ ಕಂದಾಯ ಅಧಿಕಾರಿಗಳು ತಮ್ಮ ವ್ಯಾಪ್ತಿಗೆ ಒಳಪಡುವ ಗ್ರಾಮಗಳಿಗೆ ಭೇಟಿ ನೀಡಿ ಜನರ ಸಮಸ್ಯೆಗಳನ್ನು ಬಗೆಹರಿಸಲು ಕ್ರಮ ತೆಗೆದುಕೊಳ್ಳುವಂತೆ ರಾಜ್ಯ ಸರ್ಕಾರ ಆದೇಶಿಸಿದೆ.


ಈ ಹಿನ್ನಲೆಯಲ್ಲಿ ಗ್ರಾಮಗಳಿಗೆ ಭೇಟಿ ನೀಡಿ ವಾಸ್ತವ್ಯ ಮಾಡಿ ಸಾರ್ವಜನಿಕ ಕುಂದುಕೊರತೆಗಳನ್ನು ವಿಚಾರಿಸಿ ಅದನ್ನು ಸ್ಥಳದಲ್ಲೇ ಸಮಸ್ಯೆಗಳನ್ನು ಬಗೆಹರಿಸಲು ಸರ್ಕಾರದಿಂದ ಜಿಲ್ಲಾಧಿಕಾರಿಗಳಿಗೆ ನಿರ್ದೇಶನವಿರುತ್ತದೆ.

ಅದರಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಇದೇ ಮೇ.27ರ ಶುಕ್ರವಾರ ಮಂಗಳೂರು ತಾಲೂಕಿನ ಗುರುಪುರ ಹೋಬಳಿಯ ಗಂಜಿಮಠ ಗ್ರಾಮ ಪಂಚಾಯತ್ ವ್ಯಾಪ್ತಿಯ ಮೊಗರು ಗ್ರಾಮಕ್ಕೆ ಭೇಟಿ ನೀಡಿ ಗ್ರಾಮ ವಾಸ್ತವ್ಯ ಮಾಡಲಿದ್ದಾರೆ.
ಅದಕ್ಕಾಗಿ ಗ್ರಾಮ ಲೆಕ್ಕಾಧಿಕಾರಿಗಳು ಪ್ರತಿ ಮನೆಯ ಸರ್ವೇ ಮಾಡಿಸಿ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಅರ್ಜಿಗಳನ್ನು ಸ್ವೀಕರಿಸುವಂತೆ ಈಗಾಗಲೇ ನಿರ್ದೇಶನ ನೀಡಲಾಗಿದೆ. ಆದಾಗ್ಯೂ ಸಾರ್ವಜನಿಕರು ನೇರವಾಗಿ ತಮ್ಮ ಅಹವಾಲುಗಳನ್ನು ನೀಡಲು ಬಯಸಿದ್ದದಲ್ಲೀ, ಗಂಜಿಮಠ ಗ್ರಾಮ ಪಂಚಾಯತ್‍ಗೆ ಹಾಜರಾಗಿ ನೀಡಬಹುದಾಗಿದೆ.

ತಾಲೂಕಿನ ವಿವಿಧ ಇಲಾಖೆಯ ಅಧಿಕಾರಿಗಳು ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳ ಜತೆಯಲ್ಲಿದ್ದು, ಸಮಸ್ಯೆಗಳನ್ನು ಅದಷ್ಟು ಸ್ಥಳದಲ್ಲಿ ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು. ಯಾವುದೇ ಸಮಸ್ಯೆ ಸ್ಥಳದಲ್ಲಿ ಬಗೆಹರೆಯದಲ್ಲಿ ಮುಂದಿನ ಸೂಕ್ತವಾದ ದಿನವನ್ನು ನಿರ್ಧರಿಸಿ ಸದ್ರಿ ಗ್ರಾಮದಲ್ಲಿಯೇ ಮತ್ತೊಮ್ಮೆ ಗ್ರಾಮ ವಾಸ್ತವ್ಯ ನಡೆಸಲು ನಿರ್ಧರಿಸಲಾಗುವುದು. ಈ ಸಮಯದಲ್ಲಿ ಸಾರ್ವಜನಿಕರು ಕಡ್ಡಾಯವಾಗಿ ಕೋವಿಡ್ ಸಮುಚಿತ ವರ್ತನೆಗಳನ್ನು ಪಾಲನೆ ಮಾಡುವಂತೆ ಅಪರ ಜಿಲ್ಲಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

By admin

Leave a Reply

Your email address will not be published. Required fields are marked *

error: Content is protected !!