ಶ್ರೀನಗರ (ಜಮ್ಮು ಮತ್ತು ಕಾಶ್ಮೀರ): ಉಗ್ರರ ವಿರುದ್ಧ ಭದ್ರತಾ ಪಡೆಗಳು ಸಮರ ಮುಂದುವರೆಸಿವೆ. ಶ್ರೀನಗರದ ಸೌರಾ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ನಡೆದ ಗುಂಡಿನ ಕಾಳಗದಲ್ಲಿ 2 ಲಷ್ಕರ್-ಎ-ತೊಯ್ಬಾ (ಎಲ್ಇಟಿ) ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ವರದಿಯಾಗಿದೆ.
ಎಲ್ಇಟಿ ಉಗ್ರ ಶಾಕಿರ್ ಅಹ್ಮದ್ ವಾಜಾ ಮತ್ತು ಅಫ್ರೀನ್ ಅಫ್ತಾಬ್ ಮಲಿಕ್ ಹತ್ಯೆಯಾಗಿರುವ ಉಗ್ರರು.
ಭದ್ರತಾ ಪಡೆಯ ಕಾರ್ಯಾಚರಣೆ ಸಂದರ್ಭ ಅವಂತಿಪೋರಾದ ಅಗನ್ಹಜಿಪೋರಾ ಪ್ರದೇಶದಲ್ಲಿ ಉಗ್ರರು ಸಿಕ್ಕಿಕೊಂಡಿದ್ದರು. ಇತ್ತೀಚೆಗೆ ಕಿರುತೆರೆ ನಟಿ ಅಮ್ರೀನ್ ಭಟ್ ಹತ್ಯೆಯಲ್ಲಿ ಇಬ್ಬರು ಭಾಗಿಯಾಗಿದ್ದರು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಹತ್ಯೆಯಾದ ಉಗ್ರರು ಈ ಹಿಂದೆ ಬದ್ಗಾಮ್ ಜಿಲ್ಲೆಯಲ್ಲಿ ಬುಧವಾರ 35 ವರ್ಷದ ಟಿಕ್ಟಾಕ್ ಸ್ಟಾರ್ ಅಮ್ರೀನ್ ಭಟ್ಳನ್ನು ಹತ್ಯೆ ಮಾಡಿದ್ದರು. ಟಿಕ್ಟಾಕ್ ಮತ್ತು ಟಿವಿ ಕಾರ್ಯಕ್ರಮಗಳ ಮೂಲಕ ಅಮ್ರೀನ್ ಭಟ್ ಅಪಾರ ಅಭಿಮಾನಿಗಳನ್ನು ಹೊಂದಿದ್ದರು.