ಬೆಂಗಳೂರು: ಜೆಡಿಎಸ್​ನ ಜನತಾ ಜಲಧಾರೆ ಹಾಗೂ ಇನ್ನಿತರ ಕಾರ್ಯಕ್ರಮಗಳಲ್ಲಿ ಬ್ಯುಸಿ ಆಗಿದ್ದ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ವಿಶ್ರಾಂತಿಗಾಗಿ ನಾಲ್ಕು ದಿನಗಳ ಕಾಲ ವಿದೇಶ ಪ್ರವಾಸ ಕೈಗೊಳ್ಳುತ್ತಿದ್ದಾರೆ. ಇಂದು ರಾತ್ರಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಸಿಂಗಾಪುರಕ್ಕೆ ತೆರಳಲಿರುವ ಹೆಚ್​​ಡಿಕೆ, ಜೂನ್ 2ರಂದು ನಗರಕ್ಕೆ ವಾಪಸ್ ಆಗಲಿದ್ದಾರೆ.


ಜೆಡಿಎಸ್‌ನ ಮಹತ್ವಾಕಾಂಕ್ಷಿ ಜನತಾ ಜಲಧಾರೆ ಕಾರ್ಯಕ್ರಮದಲ್ಲಿ ಸುಮಾರು ಒಂದು ತಿಂಗಳ ಕಾಲ ನಿರಂತರ ರಾಜ್ಯಾದ್ಯಂತ ಪ್ರವಾಸ ಕೈಗೊಂಡಿದ್ದರು. ಸಭೆ, ಸಮಾರಂಭಗಳಲ್ಲಿ ಭಾಗಿಯಾಗಿ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಿದ್ದರು. ಸತತ ಪ್ರವಾಸದಿಂದಾಗಿ ಬಳಲಿದ್ದರು. ಆದರೂ ವಿಧಾನಪರಿಷತ್ ಚುನಾವಣೆ ಕಾರಣದಿಂದಾಗಿ ಅಭ್ಯರ್ಥಿಗಳ ಆಯ್ಕೆ ಕಸರತ್ತಿನಲ್ಲಿ ಹಲವು ಸಭೆಗಳನ್ನು ನಡೆಸಿದ್ದರು. ಇದೀಗ ವಿಶ್ರಾಂತಿ ಪಡೆಯುವ ಉದ್ದೇಶದಿಂದ ಸಿಂಗಾಪುರ್ ಪ್ರವಾಸ ಕೈಗೊಂಡಿದ್ದಾರೆ ಎಂದು ಜೆಡಿಎಸ್‍ ಮೂಲಗಳು ತಿಳಿಸಿವೆ.

Leave a Reply

Your email address will not be published. Required fields are marked *

error: Content is protected !!