ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ದೇಶ ಕಂಡ ಅಪ್ರತಿಮ ನಾಯಕರಾಗಿದ್ದಾರೆ. ಸಮಾಜದ ಕಟ್ಟಕಡೆಯ ಜನರನ್ನು ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಮೇಲೆತ್ತುವ ಕೆಲಸವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕಳೆದ ಎಂಟು ವರ್ಷಗಳಲ್ಲಿ ಮಾಡಿದ್ದಾರೆ ಎಂದು ಕರ್ನಾಟಕದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

ಅವರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಏರ್ಪಡಿಸಲಾಗಿದ್ದ ಕೇಂದ್ರ ಪುರಸ್ಕೃತ ಯೋಜನೆಗಳ ಫಲಾನುಭವಿಗಳೊಂದಿಗೆ ಸಂವಾದ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಸಮಾಜದ ಕಟ್ಟಕಡೆಯ ವ್ಯಕ್ತಿಗಾಗಿ ಮಿಡಿಯುವ ಹೃದಯ ಶ್ರೀಮಂತಿಕೆ ಪ್ರಧಾನಿ ನರೇಂದ್ರ ಮೋದಿಯವರದ್ದು. ಹಿಂದೆಂದೂ ಈ ಪ್ರಮಾಣದಲ್ಲಿ ಇಂತಹ ಕೆಲಸ ಆಗಿರಲಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟಿದ್ದಾರೆ.

ಸಮಾಜದ ಕಟ್ಟ ಕಡೆಯ ಜನರಿಗೆ ಉತ್ತಮ ಶಿಕ್ಷಣ ನೀಡುವ ಮೂಲಕ, ಅವರು ಸ್ವಾವಲಂಬಿ, ಸ್ವಾಭಿಮಾನಿ ಬದುಕು ಕಟ್ಟಿಕೊಳ್ಳಲು ನೆರವಾಗುವ ಜನಧನ, ಸ್ವಚ್ಛ ಭಾರತ್, ಪಿಎಂ ಸ್ವನಿಧಿ, ಪಿಎಂ ಕಿಸಾನ್ ಸಮ್ಮಾನ್ ಯೋಜನೆ, ಆಯುಷ್ಮಾನ್ ಭಾರತ್ ಮುಂತಾದ ಯೋಜನೆಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರು ಜಾರಿಗೆ ತಂದಿದ್ದಾರೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.


By admin

Leave a Reply

Your email address will not be published. Required fields are marked *

error: Content is protected !!