ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ವಿಶ್ವವಿದ್ಯಾಲಯದಲ್ಲಿ ಕಾಲೇಜಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರ ಹಿಜಬ್ ಹೋರಾಟ ಮುಂದುವರಿದಿದೆ. ನಿನ್ನೆ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿದ ವಿದ್ಯಾರ್ಥಿಗಳು, ನಮಗೆ ಸಲಹೆ, ಸಹಕಾರ ನೀಡುವಂತೆ ನಾಯಕರಾದ ಯು.ಟಿ.ಖಾದರ್ ಅವರನ್ನು ಸಂಪರ್ಕ ಮಾಡಿದ್ದೆವು. ಅವರು ಸಹಾಯ ಮಾಡಿಲ್ಲ ಅವರು ಅಡ್ಯಾರ್ ನಲ್ಲಿ ಕ್ರಿಕೆಟ್ ಆಡುವುದರಲ್ಲಿ ಬ್ಯುಸಿಯಾಗಿದ್ದಾರೆ ಎಂದು ಹೇಳಿದ್ದರು. 

ವಿದ್ಯಾರ್ಥಿನಿ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಶಾಸಕ ಯು.ಟಿ.ಖಾದರ್, ಆ ವಿದ್ಯಾರ್ಥಿನಿ ಸುಳ್ಳು ಹೇಳುತ್ತಿದ್ದಾಳೆ. ಸುಳ್ಳು ಹೇಳಿದ ವಿದ್ಯಾರ್ಥಿನಿಯನ್ನು ದೇವರು ಕ್ಷಮಿಸಲಿ, ಒಳ್ಳೆ ಬುದ್ದಿ ಕೊಡಲಿ. ನಾನು ಆ ವಿದ್ಯಾರ್ಥಿನಿಯ ಸುಳ್ಳನ್ನು ಕ್ಷಮಿಸುತ್ತೇನೆ ಎಂದು ಟಾಂಗ್ ನೀಡಿದ್ದಾರೆ.

ಈ ಸಮಸ್ಯೆ ಪರಿಹರಿಸಲು ನಾನು ಸಾಕಷ್ಟು ಪ್ರಯತ್ನ ಮಾಡಿದ್ದೇನೆ. ಸರ್ಕಾರದ ಮುಖ್ಯ ಕಾರ್ಯದರ್ಶಿ ಜೊತೆ ಮಾತನಾಡಿದ್ದೇನೆ. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಜೊತೆ ಚರ್ಚೆ ಮಾಡಿದ್ದೇನೆ. ಕಾಲೇಜಿನ ಪ್ರಾಂಶುಪಾಲರು, ವಿಶ್ವವಿದ್ಯಾನಿಲಯದ ಉಪಕುಲಪತಿಗಳೊಂದಿಗೂ ಮಾತನಾಡಿದ್ದೇನೆ. ದುರುದ್ದೇಶ ಹಾಗೂ ರಾಜಕೀಯವಾಗಿ ಆಕೆಯೆ ಯಾರು ಹೇಳಿಕೊಟ್ಟಿದ್ದಾರೆಯೋ ಗೊತ್ತಿಲ್ಲ, ವಿದ್ಯಾರ್ಥಿನಿಗೆ ಹಲವು ಬಾರಿ ಫೋನ್ ಮಾಡಿದರೂ ರಿಸೀವ್ ಮಾಡಿಲ್ಲ. ನನ್ನ ಫೋನ್ ರಿಸೀವ್ ಮಾಡಿ ರಾಂಗ್ ನಂಬರ್ ಎಂದು ಹೇಳಿದಳು ಎಂದಿದ್ದಾರೆ.

Leave a Reply

Your email address will not be published. Required fields are marked *

error: Content is protected !!