ಮಂಗಳೂರು: ಪಠ್ಯಪುಸ್ತಕ ಪರಿಷ್ಕರಣೆ ವಿವಾದಕ್ಕೆ ಸಂಬಂಧಿಸಿದಂತೆ ಎಲ್ಲ ಆಯಾಮಗಳಿಂದಲೂ ಪರಿಶೀಲಿಸಲಾಗುತ್ತಿದೆ. ಈ ಕುರಿತಂತೆ ಈಗಾಗಲೇ ಶಿಕ್ಷಣ ಸಚಿವ ನಾಗೇಶ್ ಕಾರ್ಯಪ್ರವೃತ್ತರಾಗಿದ್ದಾರೆ. ತನಿಖಾ ವರದಿ ಶೀಘ್ರವಾಗಿ ಸರಕಾರಕ್ಕೆ ನೀಡಲಿದ್ದಾರೆ. ವರದಿಯನ್ನು ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ಹೇಳಿದ್ದಾರೆ.
ಮಂಗಳೂರು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಶಿಕ್ಷಣ ಸಚಿವ ಬಿ. ಸಿ. ನಾಗೇಶ್ ನೀಡುವ ವರದಿ ಆಧಾರದಲ್ಲಿ ಪಠ್ಯ ಪುಸ್ತಕ ಪರಿಷ್ಕರಣೆ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು.
ಇನ್ನು ರೋಹಿತ್ ಚಕ್ರತೀರ್ಥ ಬಗ್ಗೆ ಸದ್ಯ ಯಾವುದೇ ನಿರ್ಧಾರ ಕೈಗೊಳ್ಳಲಾಗಿದೆ. ಅವರು ನೀಡಿರುವ ಹೇಳಿಕೆಯ ಬಗ್ಗೆ ಶಿಕ್ಷಣ ಸಚಿವರು ಮಾಹಿತಿ ನೀಡಲಿದ್ದಾರೆ. ಅದನ್ನು ಪರಿಶೀಲಿಸಿ ಕ್ರಮಕೈಗೊಳ್ಳಲಾಗುವುದು. ಸತ್ಯಾಂಶ ದಾಖಲೆ ಸಹಿತ ಬಹಿರಂಗಗೊಳಿಸಲಾಗುವುದೆಂದು ಅವರು ತಿಳಿಸಿದ್ದಾರೆ.