ಕರ್ನಾಟಕದಲ್ಲಿ ಉತ್ತರಪ್ರದೇಶ ಮಾದರಿಯಲ್ಲಿ ಬುಲ್ಡೋಜರ್ ಪ್ರಯೋಗ ಮಾಡುವ ಸನ್ನಿವೇಶ ಸೃಷ್ಟಿಯಾಗಿಲ್ಲ ಎಂದು ಉಡುಪಿಯಲ್ಲಿ ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ. ಮಾಧ್ಯಮದ ಜೊತೆ ಮಾತನಾಡಿದ ಅವರು ರಾಜ್ಯದಲ್ಲಿ ಉತ್ತರಪ್ರದೇಶ ಮಾದರಿಯ ಪರಿಸ್ಥಿತಿ ಇನ್ನೂ ನಿರ್ಮಾಣವಾಗಿಲ್ಲ, ಇಲ್ಲಿ ಕಾನೂನನ್ನು ಪಾಲಿಸುವ ಮನಸ್ಥಿತಿ ಇನ್ನೂ ಉಳಿದುಕೊಂಡಿದೆ ಎಂದರು.
ಮತಾಂತರ ನಿಷೇಧ ಕಾನೂನು ವಿಧಾನಪರಿಷತ್ ನಲ್ಲಿ ಒಪ್ಪಿಗೆ ಪಡೆಯಲು ಬಾಕಿ ಉಳಿದಿದೆ. ಕಾಂಗ್ರೆಸ್ ನವರಿಗೊಂದು ಕಾನೂನು ಉಳಿದವರಿಗೊಂದು ಕಾನೂನು ಇಲ್ಲ, ರಾಹುಲ್ ಗಾಂಧಿ ತನಿಖೆ ಎದುರಿಸಬೇಕು. ನಿರಪರಾಧಿಯಾಗಿದ್ದರೆ ಅವರು ಹೊರ ಬರುತ್ತಾರೆ ,ಅಪರಾಧ ಮಾಡಿದ್ದರೆ ಶಿಕ್ಷೆಯಾಗುತ್ತದೆ. ಪ್ರತಿಭಟನೆ ಮಾಡುವ ಅವಶ್ಯಕತೆ ಇಲ್ಲ ಎಂದರು.