ಬೆಳ್ತಂಗಡಿ: ಕೊಟ್ಟಿಗೆಹಾರದಿಂದ ಚಾರ್ಮಾಡಿ ಘಾಟ್ ನಲ್ಲಿ ಕೆಲಸಕ್ಕೆ ಕಾರ್ಮಿಕರನ್ನು ಕರೆದುಕೊಂಡು ಹೋಗುತ್ತಿದ್ದ ಮಿನಿ ಗೂಡ್ಸ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಚಾರ್ಮಾಡಿ ಘಾಟ್ ನಲ್ಲಿ ಇಂದು ಬೆಳಗ್ಗೆ ನಡೆದಿದೆ.

ಗೂಡ್ಸ್ ವಾಹನ ಪಲ್ಟಿಯಾದ ಪರಿಣಾಮ ಮೂರು ಮಂದಿ ಗಾಯಗೊಂಡಿದ್ದು, ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳು ಉತ್ತರ ಪ್ರದೇಶ ಮೂಲದವರು ಎಂದು ತಿಳಿದುಬಂದಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಬಣಕಲ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಈ ಬಗ್ಗೆ ಇಲ್ಲಿನ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!