ಉದಯಪುರ : ಉದಯಪುರದಲ್ಲಿ ಹಾಡುಹಗಲೇ ಹತ್ಯೆಗೀಡಾದ ಕನ್ಹಯ್ಯಲಾಲ್‌ ಕುಟುಂಬಕ್ಕೆ ಬಿಜೆಪಿ ನಾಯಕ ಕಪಿಲ್ ಮಿಶ್ರಾ ಆನ್​ಲೈನ್‌ನಲ್ಲಿ ನಿಧಿ ಸಂಗ್ರಹ ಮಾಡಿದ್ದಾರೆ.  24 ಗಂಟೆಯಲ್ಲಿ 1 ಕೋಟಿ ರೂಪಾಯಿ ದೇಣಿಗೆ ಹಣ ಸಂಗ್ರಹವಾಗಿದೆ.


ಈ ಕುರಿತಾಗಿ ಕಪಿಲ್ ಮಿಶ್ರಾ ಟ್ವೀಟ್ ಮಾಡಿದ್ದು, ಇಂದು ಇಡೀ ಹಿಂದೂ ಸಮಾಜವು  ಕನ್ಹಯ್ಯಾ ಲಾಲ್ ಅವರ ಕುಟುಂಬದೊಂದಿಗೆ ನಿಂತಿರುವುದನ್ನು ನೋಡಿ ಸಂತೋಷವಾಗುತ್ತಿದೆ ಎಂದು ತಿಳಿಸಿದ್ಧಾರೆ.  24 ಗಂಟೆಗಳಿಗೂ ಕಡಿಮೆ ಅವಧಿಯಲ್ಲಿ 1 ಕೋಟಿ ರೂ. ಗೂ ಹೆಚ್ಚು ಹಣ ಸಂಗ್ರಹವಾಗಿದೆ. ಕನ್ಹಯ್ಯ ಹತ್ಯೆಯಿಂದ ನಮ್ಮ ಕಣ್ಣೀರನ್ನು ನಿಲ್ಲಿಸಲು ಸಾಧ್ಯವಾಗುತ್ತಿಲ್ಲ. ನಾವೆಲ್ಲಾ ಹಿಂದೂಗಳು ಕನ್ಹಯ್ಯಾ ಅವರ ಕುಟುಂಬದ ಪರವಾಗಿ ನಿಲ್ಲುತ್ತೇವೆ ಎಂದಿದ್ಧಾರೆ.

ಇದರೊಂದಿಗೆ ಕನ್ಹಯ್ಯ ಲಾಲ್ ಅವರನ್ನು ರಕ್ಷಿಸಲು ಪ್ರಯತ್ನಿಸಿದ್ದ, ಗಂಭೀರವಾಗಿ ಗಾಯಗೊಂಡು ಮಹಾರಾಣಾ ಭೋಪಾಲ್ ಸಿಂಗ್ ಆಸ್ಪತ್ರೆಗೆ  ದಾಖಲಾಗಿರುವ ಈಶ್ವರ್ ಸಿಂಗ್ ಅವರಿಗೂ 25 ಲಕ್ಷ ರೂ. ಪರಿಹಾರವನ್ನು ನೀಡಲಾಗುವುದು ಎಂದು ತಿಳಿಸಿದ್ದಾರೆ. ಶೀಘ್ರದಲ್ಲೇ ಈ ಹಣವನ್ನು ಕುಟುಂಬ ಸದಸ್ಯರಿಗೆ ಹಸ್ತಾಂತರಿಸಲಿದ್ದಾರೆ.

Leave a Reply

Your email address will not be published. Required fields are marked *

error: Content is protected !!