ಮಂಗಳೂರು : ಭಾರೀ ಮಳೆಯಿಂದಾಗಿ ಮಂಗಳೂರು- ಪಡೀಲ್ ಜಂಕ್ಷನ್‌ ವಿಭಾಗದ ರೈಲ್ವೆ ಹಳಿ ಮೇಲೆ ಪಕ್ಕದ ದರೆ ಕುಸಿದು ಮಣ್ಣು ಹಳಿ ಮೇಲೆ ಬಿದ್ದ ಘಟನೆ ಇಂದು ಬೆಳಗ್ಗೆ ನಡೆದಿದೆ. ಇದರಿಂದಾಗಿ ಈ ಭಾಗದಲ್ಲಿ ರೈಲು ಸಂಚಾರವನ್ನು ಇಂದು ರದ್ದುಪಡಿಸಲಾಗಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ಅದರಂತೆ ರೈಲು ನಂ. 06488 ಸುಬ್ರಹ್ಮಣ್ಯ – ಮಂಗಳೂರು ಸೆಂಟ್ರಲ್ ಹಾಗೂ ರೈಲು ನಂ. 06489 ಮಂಗಳೂರು ಸೆಂಟ್ರಲ್ – ಸುಬ್ರಹ್ಮಣ್ಯ ರೋಡ್ ಅನ್ ರಿಸರ್ವ್ಡ್ ಎಕ್ಸ್ ಪ್ರೆಸ್ ವಿಶೇಷ ರೈಲಿನ ಇಂದಿನ (ಜೂ.30) ಸಂಚಾರವನ್ನು ರದ್ದುಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಣ್ಣು ತೆರವು ಕಾರ್ಯ ಭರದಿಂದ ಸಾಗಿದ್ದು, ಸಂಜೆ 4:30ರ ಸುಮಾರಿಗೆ ಹಳಿಯು ಸಂಚಾರಕ್ಕೆ ಮುಕ್ತವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!