ಮುಂಬೈ: ಉದ್ಧವ್‌ ಠಾಕ್ರೆ ನಿರ್ಗಮನದಿಂದ ತೆರವಾದ ಮುಖ್ಯಮಂತ್ರಿ ಸ್ಥಾನಕ್ಕೆ ಶಿವಸೇನೆ ನಾಯಕ ಏಕನಾಥ್‌ ಶಿಂಧೆ ಅವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಆರಂಭದಲ್ಲಿ, ತಾನು ನೂತನ ಸರ್ಕಾರದ ಭಾಗವಾಗಿರುವುದಿಲ್ಲ ಎಂದು ಬಿಜೆಪಿ ಅಧ್ಯಕ್ಷ ದೇವೇಂದ್ರ ಫಡ್ನವೀಸ್‌ ಹೇಳಿದರೂ, ಬಿಜೆಪಿ ಕೇಂದ್ರ ನಾಯಕತ್ವ ಕೋರಿಕೆಯ ಮೇರೆಗೆ ಉಪಮುಖ್ಯಮಂತ್ರಿಯಾಗಿ ಕಾರ್ಯ ನಿರ್ವಹಿಸಲಿದ್ದಾರೆ ಎಂದು ವರದಿಯಾಗಿದೆ. ಏಕನಾಥ್ ಶಿಂಧೆ ನೇತೃತ್ವದ ಮಹಾರಾಷ್ಟ್ರ ಸರ್ಕಾರದ ಭಾಗವಾಗಲು ಬಿಜೆಪಿ ಅಧ್ಯಕ್ಷ ದೇವೇಂದ್ರ ಫಡ್ನವಿಸ್ ಗುರುವಾರ ಒಪ್ಪಿಗೆ ನೀಡಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

“ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ ಅವರ ಕೋರಿಕೆಯ ಮೇರೆಗೆ ದೇವೇಂದ್ರ ಫಡ್ನವೀಸ್ ಮಹಾರಾಷ್ಟ್ರ ಸರ್ಕಾರಕ್ಕೆ ಸೇರಲು ನಿರ್ಧರಿಸಿದ್ದಾರೆ. ಫಡ್ನವೀಸ್ ಅವರ ನಿರ್ಧಾರವು ಮಹಾರಾಷ್ಟ್ರದ ಜನರ ಬಗ್ಗೆ ಅವರ ಸೇವಾ ಮನೋಭಾವವನ್ನು ತೋರಿಸುತ್ತದೆ” ಎಂದು ಶಾ ಟ್ವೀಟ್‌ ಮಾಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!