ಸುಳ್ಯ: ರಸ್ತೆ ಬದಿ ತ್ಯಾಜ್ಯ ತುಂಬಿದ್ದ ಬ್ಯಾಗ್ ಎಸೆದು ಹೋಗಿದ್ದ ವ್ಯಕ್ತಿಗೆ 5 ಸಾವಿರ ದಂಡ ವಿಧಿಸಿ ಆತನಿಂದಲೇ ತ್ಯಾಜ್ಯ ತೆರವುಗೊಳಿಸಿದ ಘಟನೆ ಸುಳ್ಯ ತಾಲೂಕಿನ ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೇಂಗಮಲೆ ಎಂಬಲ್ಲಿ ನಿನ್ನೆ ನಡೆದಿದೆ.

ಜೂ.1 ರಂದು ಸುಳ್ಯದ ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೇಂಗಮಲೆ ಎಂಬಲ್ಲಿ ತ್ಯಾಜ್ಯ ಎಸೆದ ಬಗ್ಗೆ ಸ್ಥಳೀಯ ಪಿಡಿಓಗೆ ದೂರು ಹೋಗಿತ್ತು.

ತಕ್ಷಣ ಎಚ್ಚೆತ್ತ ಪಿಡಿಒ ಶ್ಯಾಮ್ ಪ್ರಸಾದ್ ಎಂ ಆರ್ ಸ್ಥಳಕ್ಕೆ ಬಂದು ಸ್ಥಳದಲ್ಲಿ ಅಳವಡಿಸಿದ್ದ ಸಿ.ಸಿ ಕ್ಯಾಮರ ದೃಶ್ಯ ಪರಿಶೀಲಿಸಿ ಹಾಗೂ ಅಲ್ಲಿ ತ್ಯಾಜ್ಯ ಎಸೆದ ಬ್ಯಾಗ್ ಗಳನ್ನು ಪರಿಶೀಲಿಸಿ ತ್ಯಾಜ್ಯ ಬಿಸಾಡಿದ ಸಚಿನ್‌ ಸುಳ್ಯ ಎಂಬುವವರನ್ನು ಪತ್ತೆ ಹಚ್ಚಿ ಆತನಿಗೆ 5000 ರೂ ದಂಡ ವಿಧಿಸಿ ಆತನಿಂದಲೇ ವಿಲೇವಾರಿಗೊಳಿಸಿದರು.

Leave a Reply

Your email address will not be published. Required fields are marked *

error: Content is protected !!