ಬೆಂಗಳೂರು: ಪಿಯುಸಿ ವಿದ್ಯಾರ್ಥಿಗಳು ಕಾಲೇಜಿಗೆ ಬೈಕ್ ಅಥವಾ ಸ್ಕೂಟರ್ ಗಳನ್ನು ತರುವಂತಿಲ್ಲ ಎಂದು ಸಂಚಾರ ವಿಭಾದ ಜಂಟಿ ಪೊಲೀಸ್ ಆಯುಕ್ತ ರವಿಕಾಂತೇಗೌಡ ತಿಳಿಸಿದ್ಧಾರೆ.

ಪಿಯುಸಿ ವಿದ್ಯಾರ್ಥಿಗಳು DL ಪಡೆಯಲು ಅರ್ಹತೆ ಹೊಂದಿರುವುದಿಲ್ಲ. ಹಾಗಾಗಿ ಅವರು ಬೈಕ್ ಅಥವಾ ಸ್ಕೂಟರ್ ಗಳಲ್ಲಿ ಕಾಲೇಜಿಗೆ ಬರುವಂತಿಲ್ಲ. ಇನ್ನು ವ್ಹೀಲಿಂಗ್ ಮಾಡುವವರ ವಿರುದ್ಧ ವಿಶೇಷ ಅಭಿಯಾನ ನಡೆಸುತ್ತಿದ್ದು, ಕಳೆದ ವಾರ ಸಾಮಾಜಿಕ ಜಾಲತಾಣಗಳಲ್ಲಿ ಬಂದಿರುವ ದೂರು ಆಧರಿಸಿ 12 ಪ್ರಕರಣ ದಾಖಲಿಸಿದ್ದೇವೆ. ವ್ಹೀಲಿಂಗ್ ಪ್ರಕರಣದಲ್ಲಿ 5 ರಿಂದ 10 ಲಕ್ಷ ರೂ.ವರೆಗೆ ಬಾಂಡ್ ಬರೆಸಿಕೊಳ್ಳುತ್ತೇವೆ ಮತ್ತು ವ್ಹೀಲಿಂಗ್ ಮಾಡುವವರ ಪೋಷಕರಿಗೆ ಕೌನ್ಸೆಲಿಂಗ್ ಮಾಡುತ್ತಿದ್ದೇವೆ ಎಂದು ರವಿಕಾಂತೇಗೌಡ ತಿಳಿಸಿದ್ಧಾರೆ.

Leave a Reply

Your email address will not be published. Required fields are marked *

error: Content is protected !!