ಪುತ್ತೂರು: ಪ್ರವೀಣ್ ಕೊಲೆ ಕೇರಳ ಮಾದರಿಯ ಕುತ್ತಿಗೆಯಿಂದ ಮೇಲ್ಭಾಗದಲ್ಲಿ ತಲೆಗೆ‌ ಹೊಡೆದು ಕೊಲೆ ಮಾಡಲಾಗಿದೆ. ಇದು ಪಿಎಫ್‌ಐನ ಕೊಲೆ ಮಾಡುವ ರೀತಿ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆರೋಪಿಸಿದ್ದಾರೆ.

ಬೆಳ್ಳಾರೆಯ ಪ್ರವೀಣ್‌ ನೆಟ್ಟಾರು ಮನೆಗೆ ಇಂದು ಭೇಟಿ ನೀಡಿ ಕುಟುಂಬಸ್ಥರನ್ನು ಸಂತೈಸಿ ಧೈರ್ಯ ತುಂಬಿದರು. ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಿಎಫ್‌ಐನವರು ಸಿರಿಯಾ, ಪಾಕಿಸ್ತಾನದಲ್ಲಿ ತರಬೇತಿ ಪಡೆದು ಭಾರತದಲ್ಲಿ ಈ ಕೃತ್ಯವನ್ನು ನಡೆಸುತ್ತಿದ್ದಾರೆ ಎನ್ನುವ ಮಾಹಿತಿ ಇದೆ.

ರುದ್ರೇಶ್‌ ಕೊಲೆ ಪ್ರಕಣದಲ್ಲಿ ಪಿಎಫ್‌ಐ ಕಾರ್ಯಕರ್ತರು ಜೈಲಿನಲ್ಲಿದ್ದಾರೆ. ಇದು ಅಂತಹದ್ದೇ ಮಾದರಿಯಲ್ಲಿ ನಡೆದಿರುವುದರಿಂದ ಈ ಬಗ್ಗೆ ಕೇಂದ್ರ ಗೃಹಸಚಿವರಿಗೆ ಭೇಟಿ ಮಾಡಿ ಪತ್ರವನ್ನು ನೀಡಿದ್ದೆ. ಇದೀಗ ಪ್ರಕರಣ ಎನ್‌ಐಗೆ ವಹಿಸಲಾಗಿದೆ. ಜೊತೆಗೆ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಉನ್ನತೀಕರಣವಾಗಬೇಕು ಎಂದು ಇದೇ ವೇಳೆ ಹೇಳಿದರು.

By admin

Leave a Reply

Your email address will not be published. Required fields are marked *

error: Content is protected !!