ಉಡುಪಿ: ಕೋಳಿ ಅಂಕಕ್ಕೆ ದಾಳಿ ನಡೆಸಿದ ಪೊಲೀಸರು 8 ಮಂದಿಯನ್ನು ಬಂಧಿಸಿ, 10 ಹುಂಜಗಳನ್ನು ವಶಪಡಿಸಿಕೊಂಡ ಘಟನೆ ಉಡುಪಿ ಜಿಲ್ಲೆಯ ಇಂದ್ರಾಳಿಯ ದೆಂದೂರುಕಟ್ಟೆಯಲ್ಲಿ ನಡೆದಿದೆ.

ನಿನ್ನೆ ಕಾಪು ಪೊಲೀಸ್ ಠಾಣಾ ವ್ಯಾಪ್ತಿಯ ದೆಂದೂರುಕಟ್ಟೆ ಎಂಬಲ್ಲಿ ಕೋಳಿ ಅಂಕ ನಡೆಯುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಕಾಪು ಠಾಣೆಯ ಪೊಲೀಸ್ ಉಪನಿರೀಕ್ಷಕ ಭರತೇಶ ಕಂಕಣವಾಡಿ ಸಿಬ್ಬಂದಿ ಜೊತೆ ದಾಳಿ ನಡೆಸಿದ್ದಾರೆ. ಈ ವೇಳೆ ಸ್ಥಳದಲ್ಲಿದ್ದವರು ಓಡಿಹೋಗಲು ಪ್ರಯತ್ನಿಸಿದ್ದಾರೆ. ತಕ್ಷಣ ಬೆನ್ನಟ್ಟಿದ್ದ ಪೊಲೀಸರು ಸದಾನಂದ ಪೂಜಾರಿ, ತೇಜಸ್, ಸುರೇಶ್, ನಿತೇಶ್, ಸಂತೋಷ್, ಸ್ವಾಮಿನಾಥ್, ಅಣ್ಣಪ್ಪ ಪೂಜಾರಿ, ಸಂದೀಪ್ ಶೆಟ್ಟಿ ಎಂಬುವವರನ್ನು ವಶಕ್ಕೆ ಪಡೆದಿದ್ದಾರೆ.

ಈ ವೇಳೆ ಸ್ಥಳದಲ್ಲಿದ್ದ 10 ಕೋಳಿ ಸಹಿತ ಬಾಳು (ಸಣ್ಣ ಕತ್ತಿ) ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಕಾಪು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

By admin

Leave a Reply

Your email address will not be published. Required fields are marked *

error: Content is protected !!