ಮಂಗಳೂರು: ಮುಂದಿನ ದಿನಗಳಲ್ಲಿ ಹತ್ಯೆಯಾದ ಮಸೂದ್, ಫಾಝಿಲ್ ಮನೆಗೆ ಭೇಟಿ ನೀಡುತ್ತೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕರಾವಳಿಯ ಸರಣಿ ಹತ್ಯೆ ಪ್ರಕರಣದಲ್ಲಿ ತನಿಖೆ ಪ್ರಗತಿಯಲ್ಲಿದೆ.ಆದಷ್ಟು ಬೇಗ ಕೊಲೆಗಡುಕರನ್ನು ಬಂಧಿಸುತ್ತೇವೆ. ಪ್ರವೀಣ್ ಹತ್ಯೆ ಪ್ರಕರಣ ಎನ್ಐಎಗೆ ಹಸ್ತಾಂತರ ಪ್ರಕ್ರಿಯೆ ನಡೆಯುತ್ತಿದೆ.
ಅದಕ್ಕೆ ಸಂಬಂಧಿಸಿದಂತೆ ಪೇಪರ್ ಕೆಲಸಗಳು ನಡೆಯುತ್ತಿದೆ. ಅನೌಪಚಾರಿಕವಾಗಿ ಎನ್ಐಎಗೆ ತಿಳಿಸಿದ್ದೇವೆ. ಆ ಪ್ರಕಾರ ಈಗಾಗಲೇ ಎನ್ಐಎ ಅಧಿಕಾರಿಗಳು ಕೇರಳ, ಮಂಗಳೂರಿನಲ್ಲಿ ಪ್ರಾಥಮಿಕ ಮಾಹಿತಿ ಕಲೆ ಹಾಕುತ್ತಿದ್ದಾರೆ ಎಂದರು.