ವಿಟ್ಲ: ಕುಸಿದು ಬಿದ್ದು ತಲೆಯ ಭಾಗಕ್ಕೆ ಗಂಭೀರ ಗಾಯಗೊಂಡಿದ್ದ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ವಿಟ್ಲದಲ್ಲಿ ನಡೆದಿದೆ.
ಮೂಲತಃ ವಿಟ್ಲ ಅಡ್ಯನಡ್ಕ ನಿವಾಸಿ ಸದ್ಯ ಸಾಲೆತ್ತೂರು ನಿವಾಸಿ ಮೊಯ್ದಿನ್ ಮೃತ ದುರ್ದೈವಿ.ವಿಟ್ಲ ಖಾಸಗಿ ಬಸ್ ನಿಲ್ದಾಣದ ರಿಕ್ಷಾ ಪಾರ್ಕಿಂಗ್ ಬಳಿ ಮೊಯ್ದೀನ್ ರವರು ಹಠಾತ್ ಕುಸಿದು ಬಿದ್ದು ತಲೆಗೆ ಗಂಭೀರ ಗಾಯವಾದ ಪರಿಣಾಮ ಅವರನ್ನು ಕೂಡಲೇ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಆದರೆ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.