ಮಂಗಳೂರು, ನಗರದ ಬಾವುಟಗುಡ್ಡೆಯಲ್ಲಿ ಪ್ರತಿಷ್ಠಾಪನೆ ಮಾಡಲಿರುವ ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡರ ಪ್ರತಿಮೆ ಇಂದು ಮಂಡ್ಯದಿಂದ ದ.ಕ. ಜಿಲ್ಲೆಗೆ ಆಗಮಿಸಿತು.

ಮೆರವಣಿಗೆ ಮೂಲಕ ವಿವಿಧ ಸಂಘಟನೆಗಳ ಪ್ರಮುಖರು ಪುಷ್ಪನಮನದ ಮೂಲಕ ಗೌರವ ಸಲ್ಲಿಸಿದರು.
ಮುಂಭಾಗದಲ್ಲಿ ಕೆದಂಬಾಡಿ ರಾಮಯ್ಯಗೌಡರ ಭಾವಚಿತ್ರದೊಂದಿಗೆ ಅಲಂಕೃತ ಬೆಳ್ಳಿರಥ ಸಾಗಿತು. ಕೊಡಗಿನ ಗುಡ್ಡೆಹೊಸೂರು, ಸುಂಟಿಕೊಪ್ಪದ ಮೂಲಕ ಮಡಿಕೇರಿಯ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತಕ್ಕೆ ಆಗಮಿಸಿತು.

ಕೆದಂಬಾಡಿ ರಾಮಯ್ಯ ಗೌಡ ಸಹವರ್ತಿ ಸ್ವಾತಂತ್ರ್ಯ ಹೋರಾಟಗಾರ ಅಪ್ಪಯ್ಯಗೌಡರ ಪ್ರತಿಮೆ ಬಳಿ ನಾಡಿನ ಹಿರಿಯರು, ಜನಪ್ರತಿನಿಧಿಗಳು, ಕೆದಂಬಾಡಿ ಕುಟುಂಬಸ್ಥರು ಹಾಗೂ ಸಾರ್ವಜನಿಕರು ಗೌರವ ಸಲ್ಲಿಸಿದರು. ನಂತರ ವಾಹನ ಜಾಥಾದೊಂದಿಗೆ ತಿಮ್ಮಯ್ಯ ವೃತ್ತ ಬಸ್ ನಿಲ್ದಾಣ, ಗುಡ್ಡೆಮನೆ ಅಪ್ಪಯ್ಯ ಗೌಡ ರಸ್ತೆಯಲ್ಲಿ ಸಾಗಿ ಕೊಡಗು ಗೌಡ ಸಮಾಜದ ಆವರಣದಲ್ಲಿ ರಥ ತಂಗಿ ಸುಳ್ಯಕ್ಕೆ ಆಗಮಿಸಿತು. ಈ ಸಂದರ್ಭದಲ್ಲಿ ಪ್ರಮುಖರು ಹಾಜರಿದ್ದರು.

ಬ್ರಿಟಿಷರ ವಿರುದ್ಧ ರಣ ಕಹಳೆ ಮೊಳಗಿಸಿದ್ದ, ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ಸುಳ್ಯದ ಕೆದಂಬಾಡಿ ರಾಮಯ್ಯಗೌಡರ ಕಂಚಿನ ಪ್ರತಿಮೆಯನ್ನು ಮಂಗಳೂರಿನ ಬಾವುಟಗುಡ್ಡೆಯಲ್ಲಿ ಪ್ರತಿಷ್ಠಾಪನೆ ಮಾಡಲು ಸಿದ್ಧತೆಗಳು ನಡೆದಿವೆ.

By admin

Leave a Reply

Your email address will not be published. Required fields are marked *

error: Content is protected !!