ಬೆಂಗಳೂರು: ಪೇ ಸಿಎಂ ಎಂದರೆ ‘ಪೇ ಕಾಂಗ್ರೆಸ್ ಮೇಡಂ’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್ಕುಮಾರ್ ಕಟೀಲ್ ವ್ಯಂಗ್ಯವಾಡಿದರು.
ಬಿಜೆಪಿ ರಾಜ್ಯ ಕಚೇರಿಯಲ್ಲಿ ಗುರುವಾರ ಮಾತನಾಡಿದ ಅವರು, ಸಿದ್ದರಾಮಯ್ಯ ಅಧಿಕಾರಾವಧಿಯ ಶೇ 100 ಭ್ರಷ್ಟಾಚಾರವನ್ನು ಅನಾವರಣಗೊಳಿಸುವ ‘ಸ್ಕ್ಯಾಮ್ ರಾಮಯ್ಯ’ ಪುಸ್ತಕವನ್ನು ಬಿಡುಗಡೆ ಮಾಡಿದರು. ಕಾಂಗ್ರೆಸ್ ಮೇಡಂಗೆ ಮಾಡುವ ಪೇಮೆಂಟ್ ಬಗ್ಗೆ ಉಲ್ಲೇಖ ಇದಾಗಿದೆ. ಶಿವಕುಮಾರ್ ಚೀಟಿ ನುಂಗಿದ್ದನ್ನು ನೋಡಿದ್ದೀರಿ. ಅವರು ಚೀಟಿ ಶಿವಕುಮಾರ್ ಆಗಿದ್ದಾರೆ ಎಂದು ಟೀಕಿಸಿದರು.
ಕಾಂಗ್ರೆಸ್ನ ಅತಿ ಹೆಚ್ಚು ಜನರು ಕಾಂಗ್ರೆಸ್ನ ರಾಷ್ಟ್ರೀಯ ನಾಯಕರು, ರಾಜ್ಯದ ನಾಯಕರು ಹಗರಣಗಳಲ್ಲಿ ಸಿಲುಕಿದ್ದಾರೆ. ತನಿಖೆಯ ಫಲಿತಾಂಶಗಳು ಕಾಂಗ್ರೆಸ್ ಪಕ್ಷವನ್ನು ಮುಜುಗರಕ್ಕೆ ಈಡುಮಾಡಿವೆ. ಜನರ ದಾರಿ ತಪ್ಪಿಸಲು ಕಾಂಗ್ರೆಸ್ ಪಕ್ಷ ಪ್ರಯತ್ನಿಸುತ್ತಿದೆ. ಸಿದ್ದರಾಮಣ್ಣನ ಕಾಲಘಟ್ಟದಲ್ಲೂ ಅತಿಹೆಚ್ಚು ಹಗರಣಗಳು ನಡೆದಿದ್ದು, ಲೋಕಾಯುಕ್ತ ಶಕ್ತಿ ಕುಂದಿಸಿ ಹಗರಣಗಳನ್ನು ಮುಚ್ಚಿ ಹಾಕಲು ಆಗಿನ ಸರಕಾರ ಮುಂದಾಗಿತ್ತು ಎಂದು ತಿಳಿಸಿದರು.