• ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಯವರ ಯವರ ಜೊತೆ ಕಾರ್ಯಕರ್ತರು ಸೆಲ್ಫಿ ತೆಗೆಯುವುದರೊಂದಿಗೆ ಮಿಥುನ್ ರೈ ಅವರ ಹೇಳಿಕೆ ತಿರುಗೇಟು ನೀಡಿದರು.

    ಶೋಭಾ ಕರಂದ್ಲಾಜೆ ಜೊತೆ ಉಡುಪಿ ಕ್ಷೇತ್ರದಲ್ಲಿ ಫೋಟೋ ತೆಗೆದವರಿಗೆ 5000 ಬಹುಮಾನ ನೀಡುವುದಾಗಿ ಕಾಂಗ್ರೆಸ್ ನಾಯಕ ಮಿಥುನ್ ರೈ ಘೋಷಿಸಿದ್ದರು.ಸೇವಾ ಪಾಕ್ಷಿಕದ ಅಂಗವಾಗಿ ಕಾಪು ಪೇಟೆಯಲ್ಲಿ ಖಾದಿ ಮೇಳವನ್ನು ಉದ್ಘಾಟಿಸಿದ ನಂತರ ಮಹಿಳಾಮೋರ್ಚಾ, ಯುವಮೋರ್ಚಾ ಕಾರ್ಯಕರ್ತರು ಸಚಿವೆಯೊಂದಿಗೆ ಸೆಲ್ಫಿ ತೆಗೆಯಲು ಮುಗಿ ಬಿದ್ದರು.ಈ ಸಂದರ್ಭದಲ್ಲಿ ಮಾತನಾಡಿದ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ವೀಣಾ ಶೆಟ್ಟಿ, ಜನಪರ ಕೆಲಸ ಮಾಡುತ್ತಿರುವ ಸರಳ ಸಂಸದೆ, ಸಚಿವರ ಜೊತೆ ಸೆಲ್ಫಿ ತೆಗೆದರೇ ಬಹುಮಾನ ನೀಡುವುದಾಗಿ ಕಾಂಗ್ರೆಸಿನ ಮಿಥುನ್ ರೈ ಹೇಳಿದ್ದಾರೆ. ಹೀಗಾಗಿ ಶೋಭಾಕ್ಕನವರ ಜೊತೆ ಮಹಿಳಾಮೋರ್ಚಾದ ತಂಡ ಸೆಲ್ಫಿ ತೆಗೆದು ಮಿಥುನ್ ರೈ ಅವರ ಸ್ಪರ್ಧೆಯಲ್ಲಿ ಭಾಗವಹಿಸುತ್ತಿದ್ದೇವೆ ಎಂದರು.ಈ ವಿಚಾರವಾಗಿ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ, ಸಚಿವೆ ಶೋಭಾ, “ಈ ವಿಷಯಕ್ಕೆ ನಾನು ಪ್ರತಿಕ್ರಿಯೆ ನೀಡಲ್ಲ, ಅವನನ್ನು ಯಾಕೆ ದೊಡ್ಡ ಮನುಷ್ಯ ಮಾಡಬೇಕು, ಅವನು ಚಿಲ್ಲರೆ ಮನುಷ್ಯ. ಬೇಕಿದ್ದರೆ ಬರಲಿ ಎಲ್ಲರೂ ಸೆಲ್ಫಿ ತೆಗೆಯಲು ಬರಲಿ ಮಿಥುನ್ ರೈ ಫಸ್ಟ್ ಬರಲಿ” ಎಂದು ತಿರುಗೇಟು ನೀಡಿದರು.

By admin

Leave a Reply

Your email address will not be published. Required fields are marked *

error: Content is protected !!