ಸ್ಕೂಟಿಗೆ ಮಾರುತಿ ಕಾರು ಢಿಕ್ಕಿಯಾಗಿ ಸಂಭವಿಸಿದ ಅಪಘಾತದಲ್ಲಿ ಅಣ್ಣ-ತಂಗಿ ಇಬ್ಬರು ದಾರುಣವಾಗಿ ಮೃತಪಟ್ಟ ಘಟನೆ ಸುಳ್ಯ ತಾಲೂಕಿನ ಎಲಿಮಲೆಯಲ್ಲಿ ನಡೆದಿದೆ. ಸ್ಕೂಟಿ ಚಲಾಯಿಸುತ್ತಿದ್ದ ಬಾಲಕ ಅಪಘಾತ ನಡೆದು ಕೆಲ ಸಮಯದಲ್ಲೇ ಮೃತಪಟ್ಟರೆ, ಗಂಭೀರ ಗಾಯಗೊಂಡಿದ್ದ ತಂಗಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆ ಸಾವನ್ನಪ್ಪಿದ್ದಾರೆ.

  • ಬಾಜಿನಡ್ಕದ ದೇವಿಪ್ರಸಾದ್ ಎಂಬವತ ಮಕ್ಕಳಾದ ನಿಶಾಂತ್ ಮತ್ತು ಮೋಕ್ಷಾ ಸಾವನ್ನಪ್ಪಿದವರು. ನಿಶಾಂತ್ ಚಲಾಯಿಸುತ್ತಿದ್ದ ಸ್ಕೂಟಿಗೆ ಎಲಿಮಲೆ ಮತ್ತು ಜಬಳೆ ಮಧ್ಯೆ ಮಾರುತಿ 800 ಕಾರು ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಗಂಭೀರವಾಗಿ ಗಾಯಗೊಂಡ ನಿಶಾಂತ್‌ನನ್ನು ಕೂಡಲೇ ಆಸ್ಪತ್ರೆಗೆ ಸಾಗಿಸುವ ವೇಳೆ ಮಾರ್ಗ ಮಧ್ಯೆಯೇ ಅವರು ಸಾವನ್ನಪ್ಪಿದ್ದರು.ಇನ್ನು ಗಂಭೀರ ಗಾಯಗೊಂಡಿದ್ದ ತಂಗಿ ಮೋಕ್ಷಾಳನ್ನು ಸುಳ್ಯದ ಆಸ್ಪತ್ರೆಗೆ ಕರೆದೊಯ್ದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದೊಯ್ಯುವ ವೇಳೆ ಆಕೆ ಅಸುನೀಗಿದಳೆಂದು ತಿಳಿದು ಬಂದಿದೆ. ಮೃತ ನಿಶಾಂತ್ ಸುಳ್ಯ ಜೂನಿಯರ್ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿ. ಮೋಕ್ಷಾ ದೇವಚಳ್ಳ ಸಮಾಹಿಪ್ರಾ ಶಾಲೆಯ 5ನೇ ತರಗತಿ ವಿದ್ಯಾರ್ಥಿನಿ. ಇಬ್ಬರೂ ಪ್ರತಿಭಾನ್ವಿತ ವಿದ್ಯಾರ್ಥಿಗಳಾಗಿದ್ದರು.

By admin

Leave a Reply

Your email address will not be published. Required fields are marked *

error: Content is protected !!