ಮಂಗಳೂರು : ಸಾಮಾಜಿಕ ಕಾರ್ಯಕರ್ತೆ ಹಾಗೂ ಕೆಪಿಸಿಸಿ ಸಂಯೋಜಕಿಯಾಗಿರುವ ಪ್ರತಿಭಾ ಕುಳಾಯಿ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಾನಹಾನಿ ಮಾಡಿರುವ ಪ್ರಕರಣದ 2ನೆ ಆರೋಪಿ ಕೆ.ಆರ್. ಶೆಟ್ಟಿ ಎಂಬಾತ ಇಂದು ತನ್ನ ವಕೀಲರ ಮೂಲಕ ಕೋರ್ಟ್ಗೆ ಹಾಜರಾಗಿದ್ದಾನೆ.
ಪ್ರಕರಣದ ವಿಚಾರಣೆ ನಡೆಸುತ್ತಿರುವ ಪೊಲೀಸ್ ಅಧಿಕಾರಿ ಆರೋಪಿಯನ್ನು ಪೊಲೀಸ್ ಕಸ್ಟಡಿಗೆ ನೀಡುವಂತೆ ಕೋರಿದ್ದು, ನ್ಯಾಯಾಲಯದ ಆದೇಶಕ್ಕಾಗಿ ಎದುರು ನೋಡಲಾಗುತ್ತಿದೆ ಎಂದು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ತಿಳಿಸಿದ್ದಾರೆ.