ಶ್ರೀ ಮಹಮ್ಮಾಯೀ ಭಜನಾ ಮಂಡಳಿ (ರಿ.) ನಾಗವನ – ಕುಂಟ್ರಕಲ, ಕೊಳ್ನಾಡು ಗ್ರಾಮ ಹಾಗೂ ವಿಶ್ವ ಹಿಂದೂ ಪರಿಷತ್, ಭಜರಂಗದಳ, ಶಿವಾಜಿ ಶಾಖೆ – ಕುಂಟ್ರಕಲ, ಕೊಳ್ನಾಡು ಗ್ರಾಮ ಇದರ ಜಂಟಿ ಆಶ್ರಯದಲ್ಲಿ, ಶ್ರೀ ಮಹಮ್ಮಾಯೀ ಭಜನಾ ಮಂದಿರ, ನಾಗವನ – ಕುಂಟ್ರಕಲ ಇಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಭಜನೆ, ಗೋಪೂಜೆ ಹಾಗೂ ವಾಹನ ಪೂಜೆ ಕಾರ್ಯಕ್ರಮ ಜರುಗಿತು.

ಕಾರ್ಯಕ್ರಮದಲ್ಲಿ ಅನ್ನಸಂತರ್ಪಣೆ ನಡೆಸಲಾಗಿತ್ತು.
ಮಕ್ಕಳು ತಾವೇ ತಯಾರಿಸಿದ ಗೂಡುದೀಪಗಳಿಂದ ಮಂದಿರವನ್ನು ಅಲಂಕರಿಸಲಾಗಿತ್ತು.
ಇತ್ತೀಚೆಗೆ ದೈವಾಧೀನರಾದ ಗಂಗಮ್ಮ ಕಲ್ಲೋಡಿ (ರಘುನಾಥ ನಾಯ್ಕರವರ ಪತ್ನಿ) ಇವರಿಗೆ ಮೂರು ಮಕ್ಕಳಿದ್ದು ಬಡ ಕುಟುಂಬವಾಗಿರುತ್ತದೆ: ವಿದ್ಯಾಭ್ಯಾಸ ನಡೆಸುತ್ತಿರುವ ಈ ಮೂರು ಮಕ್ಕಳು ಮಂಡಳಿಯ ಜೊತೆ ಭಜನೆಯಲ್ಲಿ ತೊಡಗಿಕೊಳ್ಳುತ್ತಿದ್ದು, ದೀಪಾವಳಿಯ ಈ ಕಾರ್ಯಕ್ರಮದಲ್ಲಿ ಇವರಿಗೆ 50ಕಿಲೋ ಅಕ್ಕಿಯನ್ನು ಮಂಡಳಿಯ ವತಿಯಿಂದ ನೀಡಲಾಯ್ತು.

ಈ ಸಂದರ್ಭ ಮಹಮ್ಮಾಯೀ ಭಜನಾ ಮಂಡಳಿ (ರಿ.) ನಾಗವನ – ಕುಂಟ್ರಕಲ, ಶ್ರೀ ಮಹಮ್ಮಾಯೀ ಮಾತೃ ಮಂಡಳಿ, ಕುಂಟ್ರಕಲ ಹಾಗೂ ವಿಶ್ವ ಹಿಂದೂ ಪರಿಷತ್, ಭಜರಂಗದಳ, ಶಿವಾಜಿ ಶಾಖೆ – ಕುಂಟ್ರಕಲ ಇದರ ಅಧ್ಯಕ್ಷ, ಪ್ರಧಾನ ಕಾರ್ಯದರ್ಶಿ, ಸಂಚಾಲಕರು, ಪದಾಧಿಕಾರಿಗಳು ಹಾಗೂ ಸದಸ್ಯರು ಹಾಗೂ ಅನೇಕ ಭಕ್ತಾದಿಗಳು ಉಪಸ್ಥಿತರಿದ್ದರು.

By admin

Leave a Reply

Your email address will not be published. Required fields are marked *

error: Content is protected !!