ಭಾರತೀಯ ಜನತಾ ಪಕ್ಷ ಚುನಾವಣೆಗೆ ವಿಶೇಷ ಸಿದ್ಧತೆ ಏನು ಮಾಡಿಕೊಂಡಿಲ್ಲ ನಾವು ಸದಾ ಚುನಾವಣೆಗೆ ಸಿದ್ದರಾಗಿರುತ್ತವೆ. ನಮ್ಮ ಸರಕಾರ ಅಭಿವೃದ್ಧಿಯ ಕಡೆಗೆ ಹೆಚ್ಚಿನ ಒತ್ತನ್ನು ಕೊಡುತ್ತಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳನ್ನು ಜನತೆಗೆ ಮುಟ್ಟಿಸುವ ಮತ್ತು ವಿವರಿಸುವ ಕೆಲಸವನ್ನು ಮಾಡುತ್ತಿದ್ದೇವೆ” ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಎಸ್ ಅಂಗಾರ ತಿಳಿಸಿದರು.

ಉಡುಪಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು “ಕರ್ನಾಟಕ ರಾಜ್ಯದಲ್ಲಿ ಒಳನಾಡು ಮೀನುಗಾರಿಕೆಗೆ ಸಂಬಂಧಪಟ್ಟ ಹಾಗೆ ಮೊಟ್ಟಮೊದಲ ಕಾರ್ಯಗಾರವನ್ನು ಕರ್ನಾಟಕದಲ್ಲಿ ಆಯೋಜನೆ ಮಾಡಲಾಗಿದೆ. ಮೀನಿನಿಂದ ಬೇರೆ ಬೇರೆ ಉತ್ಪನ್ನಗಳನ್ನ ತಯಾರಿಸುವ ಬಗ್ಗೆ ಸಂಪೂರ್ಣ ಮೀನು ಕೃಷಿಗೆ ರಾಜ್ಯ ಮತ್ತು ಕೇಂದ್ರ ಸರ್ಕಾರ ಸಂಪೂರ್ಣವಾದ ಪ್ರೋತ್ಸಾಹವನ್ನು ಕೊಡಲಿದೆ. ಕರ್ನಾಟಕ ಕರಾವಳಿಯಲ್ಲಿ ಸಿಗುವ ಮೀನು ಗಳನ್ನು ಮಾರುಕಟ್ಟೆ ಮಾಡುವ ಮತ್ತು ರಫ್ತು ಮಾಡುವ ಬಗ್ಗೆ ಕಾರ್ಯಯೋಜನೆಗಳನ್ನು ರೂಪಿಸಲಾಗಿದೆ. ಕೃತಕ ಮತ್ತು ನೈಸರ್ಗಿಕ ಮೀನುಗಾರಿಕೆಯ ಬಗ್ಗೆ ಕಾರ್ಯಗಾರದಲ್ಲಿ ಚರ್ಚೆಗಳನ್ನು ಮಾಡಲಾಗಿದೆ. ಸಿಹಿ ನೀರಿನ ಮೀನುಗಾರಿಕೆ ಕೃತಕ ಮೀನುಗಾರಿಕೆ ಬಗ್ಗೆ ಕೂಡ ಯೋಜನೆಗಳನ್ನು ಮಾಡಲಾಗಿದೆ. ವಿಶ್ವದಲ್ಲೇ ಭಾರತವನ್ನು ಅತಿ ಹೆಚ್ಚು ಮೀನು ಉತ್ಪಾದನೆ ಮಾಡುವ ಮತ್ತು ರಫ್ತು ಮಾಡುವ ದೇಶ ಮಾಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಚಿಂತನೆ ಇದೆ. ದೇಶದ ಎಲ್ಲಾ ಮೀನುಗಾರಿಕಾ ಸಚಿವರಿಗೆ ಪ್ರಧಾನಿ ಸೂಚನೆ ಕೊಟ್ಟಿದ್ದಾರೆ. ದೇಶದಲ್ಲೇ ಕರ್ನಾಟಕವನ್ನ ಮೀನುಗಾರಿಕೆ ಉತ್ಪಾದನೆ ಮತ್ತು ರಫ್ತು ವಿಚಾರದಲ್ಲಿ ದೇಶದಲ್ಲಿ ನಂಬರ್ ಒನ್ ಮಾಡಬೇಕು ಎಂಬ ಉದ್ದೇಶವನ್ನ ಇಟ್ಟುಕೊಂಡಿದ್ದೇವೆ. ಫಿಶ್ ಮಿಲ್ ಗಳಲ್ಲಿ ಮೀನು ಸಂಸ್ಕರಣೆ, ರಫ್ತು ಮಾಡುವ ಸಂದರ್ಭ ಬಹಳ ತ್ಯಾಜ್ಯಗಳು ಉಳಿಯುತ್ತವೆ. ತ್ಯಾಜ್ಯಗಳನ್ನ ಬಳಸಿ ಬಯೋಡಿಸೇಲ್ ಮಾಡುವ ಬಗ್ಗೆ ಚಿಂತನೆ ಇದೆ. ಮುಲ್ಕಿಯಲ್ಲಿರುವ ಮೀನುಗಾರಿಕಾ ಇಲಾಖೆಯ ಸಂಬಂಧ ಪಟ್ಟ ಜಮೀನಿನಲ್ಲಿ ಇದರ ಸಂಶೋಧನೆ ನಡೆಯುತ್ತದೆ. ಮುಂದಿನ ಜನವರಿ ತಿಂಗಳ ಒಳಗೆ ಈ ಪ್ರಾಜೆಕ್ಟ್ ಆರಂಭವಾಗುತ್ತದೆ”.

By admin

Leave a Reply

Your email address will not be published. Required fields are marked *

error: Content is protected !!