ಕಲಬುರ್ಗಿ: ಪಿಎಸ್‌ಐ ನೇಮಕಾತಿ ಅಕ್ರಮ ಸದ್ಯಕ್ಕೆ ನಿಲ್ಲುವ ಲಕ್ಷಣಗಳು ಕಾಣಿಸ್ತಿಲ್ಲ. ಇದೀಗ ನೇಮಕಾತಿ ಹಗರಣ ಸಂಬಂಧ ಮತ್ತೊಬ್ಬ ಪ್ರಮುಖ ಆರೋಪಿಯನ್ನು ಸಿಐಡಿ ಬಂಧಿಸಿದೆ.

ಕಲ್ಯಾಣ ಕರ್ನಾಟಕ ಕೋಟಾದಲ್ಲಿ ಮೊದಲ ರಾಂಕ್‌ ಪಡೆದಿದ್ದ ಸುಪ್ರಿಯಾ ಹುಂಡೇಕರ್‌ ಅವರನ್ನು ಸಿಐಡಿ ಪೊಲೀಸರು ಕಲಬುರ್ಗಿಯಲ್ಲಿ ಬಂಧಿಸಿದ್ದಾರೆ. ಕಲಬುರ್ಗಿ ಜಿಲ್ಲೆ ಜೇವರ್ಗಿ ಬಳಿಯ ಹಿಪ್ಪರಗಾ ಗ್ರಾಮದ ಸುಪ್ರಿಯಾ ಹುಂಡೇಕರ್‌ ಬ್ಲೂಟೂತ್ ಬಳಸಿ ಪರೀಕ್ಷೆ ಬರೆದಿದ್ದಾರೆಂದು ಹೇಳಲಾಗಿದೆ. ಹೀಗಾಗಿ ಅವರನ್ನು ಬಂಧಿಸಲಾಗಿದೆ. ಮತ್ತೊಬ್ಬ ಆರೋಪಿಗಾಗಿ ಸಿಐಡಿ ಅಧಿಕಾರಿಗಳು ಹುಡುಕಾಟ ನಡೆಸಿದ್ದಾರೆ. ಇನ್ನು ಸುಪ್ರಿಯಾ ವಿಚಾರಣೆ ಬಳಿಕ ಇನ್ನಷ್ಟು ಅಕ್ರಮಗಳು ಬಯಲಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

By admin

Leave a Reply

Your email address will not be published. Required fields are marked *

error: Content is protected !!