ಸುರತ್ಕಲ್, ಸಂಸದ ನಳಿನ್ ಕುಮಾರ್ ಕಟೀಲ್ ಅವರು ಅನಾರೋಗ್ಯದಿಂದಿರುವ ವಿಚಾರಕ್ಕೆ ಸಂಬಂಧಿಸಿದಂತೆ ಟೋಲ್ ವಿರೋಧಿ ಹೋರಾಟಗಾರ ಮುನೀರ್ ಕಾಟೀಪಳ್ಳ ಪ್ರತಿಕ್ರಿಯೆ ನೀಡಿದ್ದು, ಸಂಸದರು ಅನಾರೋಗ್ಯದಲ್ಲಿದ್ದರೆ, ಶೀಘ್ರವೇ ಗುಣಮುಖರಾಗಿ ಬರಲಿ ಎಂದು ಪ್ರಾರ್ಥಿಸುತ್ತೇವೆ ಎಂದಿದ್ದಾರೆ.
ನಳಿನ್ ಕುಮಾರ್ ಅವರು ಅನಾರೋಗ್ಯದಲ್ಲಿಲ್ಲ ಬದಲಾಗಿ ಅವರು ಅಜ್ಞಾತವಾಸದಲ್ಲಿದ್ದಾರೆ. ನಮ್ಮ ಹೋರಾಟ ಅವರು ನೀಡಿರುವ ಭರವಸೆ ಇವೆಲ್ಲದರಿಂದ ದೂರ ಇರುವ ಸಲುವಾಗಿ ಅಜ್ಞಾತವಾಸದಲ್ಲಿದ್ದಾರೆ ಎಂದು ಟೋಲ್ ವಿರೋಧಿ ಹೋರಾಟಗಾರ ಮುನೀರ್ ಕಾಟಿಪಳ್ಳ ವಾಗ್ದಾಳಿ ನಡೆಸಿದ್ದಾರೆ.