ಮಂಗಳೂರು: ರಾಜ್ಯದಲ್ಲಿ ಬಿಜೆಪಿಯಲ್ಲಿ ಗುರುತಿಸಿಕೊಂಡವರ 11 ಬೀಫ್ ಫ್ಯಾಕ್ಟರಿಗಳು ಮಂಗಳೂರಿನಲ್ಲಿವೆ. ಅದನ್ನು ಬಂದ್ ಮಾಡಿಸುವ ತಾಕತ್ತು ಬಿಜೆಪಿ ಸರ್ಕಾರಕ್ಕಿದೆಯೇ ಎಂದು ವಿಧಾನಸಭೆಯ ವಿಪಕ್ಷ ನಾಯಕ ಯು.ಟಿ.ಖಾದರ್ ಕಿಡಿಕಾರಿದರು. ನಗರದಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಸೆಂಟ್ರಲ್ ಮಾರುಕಟ್ಟೆಯಲ್ಲಿ ಬೀಫ್ ಸ್ಟಾಲ್ಗಳನ್ನು ಆರಂಭಿಸುವ ವಿಚಾರದಲ್ಲಿ ಎದ್ದಿರುವ ವಿವಾದಕ್ಕೆ ಸಂಬಂಧಿಸಿದಂತೆ ಅವರು ಈ ರೀತಿಯಾಗಿ ಪ್ರತಿಕ್ರಿಯಿಸಿದ್ದಾರೆ.
ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಮಾತನಾಡಿದ ಅವರು, “ಸೆಂಟ್ರಲ್ ಮಾರುಕಟ್ಟೆಯಲ್ಲಿ ಬೀಫ್ ಸ್ಟಾಲ್ಗಳನ್ನು ಆರಂಭಿಸುವ ವಿಚಾರ ಮಂಗಳೂರು ಮಹಾನಗರ ಪಾಲಿಕೆ ಹಾಗೂ ಸ್ಥಳೀಯ ಜನಪ್ರತಿನಿಧಿಗಳಿಗೆ ಸಂಬಂಧಿಸಿದ್ದು. ಇದರ ಬಗ್ಗೆ ಅವರು ಕಾನೂನು ಕ್ರಮ ಕೈಗೊಳ್ಳಲಿ” ಎಂದರು