ಪುತ್ತೂರು: ಹಠಾತ್ತನೇ ಆರೋಗ್ಯದಲ್ಲಿ ಏರುಪೇರಾಗಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿಯೋರ್ವಳು ಮೃತಪಟ್ಟ ದಾರುಣ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು ಸಮೀಪದ ನೆಲ್ಲಿಕಟ್ಟೆ ನಿವಾಸಿ ಸತೀಶ್ ಭಂಡಾರಿ ಎಂಬವರ ಪುತ್ರಿ 14 ವರ್ಷದ ಹಿಮಾನಿ ಮೃತ ವಿದ್ಯಾರ್ಥಿನಿಯಾಗಿದ್ದಾಳೆ.
ಪುತ್ತೂರಿನ ವಿಕ್ಟರ್ಸ್ ಶಾಲೆಯ ವಿದ್ಯಾರ್ಥಿನಿಯಾಗಿದ್ದ ಹಿಮಾನಿಗೆ ನಿನ್ನೆ ರಾತ್ರಿ ವೇಳೆಗೆ ಆರೋಗ್ಯದಲ್ಲಿ ಹಠಾತ್ತನೆ ಏರು ಪೇರಾಗಿದ್ದ ಹಿನ್ನೆಲೆಯಲ್ಲಿ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು , ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದರಾದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾಳೆ ಎಂದು ತಿಳಿದುಬಂದಿದೆ.