ಬಂಟ್ವಾಳ : ಆಟೋ ಚಾಲಕನೋರ್ವನನ್ನು ಕಡಿದು ಕೊಲೆ ಮಾಡಲು ಯತ್ನಿಸಿದ ಘಟನೆ ಬೋಳಂತೂರು ಸಮೀಪದ ನಾಡಾಜೆಯಲ್ಲಿ ನಡೆದಿದೆ. ಬೋಳಂತೂರು ಸಮೀಪದ ಗುಳಿ ನಿವಾಸಿ ಅಬೂಬಕ್ಕರ್ ಪುತ್ರ ಆಟೋ ಚಾಲಕ ಶಾಕೀರ್ ಹಲ್ಲೆಗೊಳಗಾದವರು. ಇವರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಬಡ್ಡಿ ಮ್ಯಾಚ್ ಮುಗಿಸಿ ರಾತ್ರಿ 2 ಗಂಟೆಯ ಬಳಿಕ ಮನೆಗೆ ಹಿಂತಿರುಗುತ್ತಿದ್ದ ಶಾಕೀರ್‌ನನ್ನು ಬೋಳಂತೂರು ಸಮೀಪದ ನಾಡಾಜೆ ರಸ್ತೆಯಲ್ಲಿ ತಡೆದು ನಾಲ್ವರು ದುಷ್ಕರ್ಮಿಗಳಿಂದ ತಲವಾರಿನಿಂದ ದಾಳಿ ನಡೆಸಿದ್ದಾರೆ. ದಾಳಿಯ ನಂತರ ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಪರಿಚಯಸ್ಥರೇ ಈ ಹೇಯ ಕೃತ್ಯ ಎಸಗಿರಬೇಕೆಂದು ಸ್ಥಳೀಯರು ಆರೋಪಿಸಿದ್ದಾರೆ. ವಿಟ್ಲ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

By admin

Leave a Reply

Your email address will not be published. Required fields are marked *

error: Content is protected !!