ವಿಟ್ಲ: ವಿದ್ಯುತ್ ಶಾಕ್ ತಗುಲಿ ಬಾಲಕನೋರ್ವ ಮೃತಪಟ್ಟ ಘಟನೆ ಮಂಜೇಶ್ವರ ತಾಲೂಕಿನ ಎಣ್ಮಕಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಡ್ಯನಡ್ಕದ ಸಾಯ ಎಂಬಲ್ಲಿ ನಡೆದ ಬಗ್ಗೆ ವರದಿಯಾಗಿದೆ.
ಎಣ್ಮಕಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಡ್ಯನಡ್ಕ ಸಮೀಪದ ಒಂದನೇ ವಾರ್ಡ್ ಸಾಯ ನಿವಾಸಿ
ನಾರಾಯಣ ನಾಯ್ಕ ಎಂಬವರ ಪುತ್ರ ಜಿತೇಶ್ (17) ಮೃತ ದುರ್ದೈವಿ ಬಾಲಕ. ನ.೨೮ರಂದು ರಾತ್ರಿ ನಡೆದ ವಿದ್ಯುತ್ ಅವಘಟ ಸಂಭವಿಸಿದೆ.
ವ್ಯಕ್ತಿಯೋರ್ವರು ಹಂದಿ ಹಿಡಿಯಲು ಅಕ್ರಮವಾಗಿ ಗದ್ದೆಯಲ್ಲಿ ವಿದ್ಯುತ್ ಅಳವಡಿಸುರುವುದೇ ಘಟನೆಗೆ ಕಾರಣವೆಂದು ಆರೋಪಿಸಿರುವ ಸಂದೇಶಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಪೊಲೀಸರು ಸೂಕ್ತ ಕ್ರಮಕೈಗೊಳ್ಳಬೇಕೆಂದು ನಾಗರಿಕರು ಒತ್ತಾಯಿಸಿದ್ದಾರೆ. ಮೃತದೇಹವನ್ನು ವಿಟ್ಲ ಸಮುದಾಯ ಆರೋಗ್ಯಕೇಂದ್ರದ ಶವಗಾರದಲ್ಲಿ ಇಡಲಾಗುದ್ದು, ಬದಿಯಡ್ಕ ಠಾಣಾ ಪೊಲೀಸರು ಸ್ಥಳಕ್ಕಾಗಮಿಸಿ ಮಾಹಿತಿ ಸಂಗ್ರಹಿಸದ್ದಾರೆ.