ಬೆಂಗಳೂರು : ಚುನಾವಣೆ ಸಮೀಪಿಸುತ್ತಿರುವಂತೆ ರೌಡಿ ಶೀಟರ್‌ಗಳು ರಾಜಕೀಯ ಎಂಟ್ರಿಯಾಗುತ್ತಿರುವ ವಿಚಾರ ಭಾರೀ ಚರ್ಚೆ, ಪಕ್ಷಗಳ ನಡುವೆ ಆರೋಪ-ಪ್ರತ್ಯಾರೋಪಗಳಿಗೆ ಕಾರಣವಾಗಿವೆ.

ಈ ಬಗ್ಗೆ ಬಿಜೆಪಿ ವಿರುದ್ಧ ವಾಗ್ದಾಳಿ ಮುಂದುವರಿಸಿರುವ ಕಾಂಗ್ರೆಸ್‌ ‘ಪೊಲೀಸರ ಎದುರು ಪರೇಡ್‌ ಮಾಡುತ್ತಿದ್ದ ರೌಡಿಗಳು ಈಗ ಬಿಜೆಪಿ ಕಚೇರಿಯಲ್ಲಿ ಪಕ್ಷ ಸೇರಲು ಪರೇಡ್‌ ಮಾಡುತ್ತಿದ್ದಾರೆ! ರೌಡಿಗಳ ಸಮರ್ಥನೆಗೆ ಇಳಿದಿದ್ದು, ಬೆಂಗಳೂರಿನಲ್ಲಿ ಕ್ರೈಮ್‌ ರೇಟ್‌ ಜಾಸ್ತಿಯಾಗಿದೆ’ ಎಂದು ಟ್ವೀಟ್‌ ಮೂಲಕ ತಿರುಗೇಟು ನೀಡಿದೆ

ಗಡಿಪಾರು ಆಗಿದ್ದ ವ್ಯಕ್ತಿಯನ್ನೇ ಪಕ್ಷದ ರಾಷ್ಟ್ರಾಧ್ಯಕ್ಷನನ್ನಾಗಿ ಮಾಡಿದ್ದ ಬಿಜೆಪಿಗೆ ಪುಡಿ ರೌಡಿಗಳೆಲ್ಲ ದೇವರುಗಳಂತೆ ಕಾಣುವುದು ಸಹಜ ವಿಚಾರವೇ..ದೋ ನಂಬರ್ ದಂಧೆ ಮಾಡುವವರೇ ಬಿಜೆಪಿಗೆ ಅದರ್ಶಪುರುಷರು.ಕ್ರಿಮಿನಲ್‌ಗಳನ್ನು ಸುಭಗರಂತೆ ಸಮರ್ಥಿಸುತ್ತಿರುವ ಬಿಜೆಪಿ ಲಜ್ಜೆಗೇಡಿತನದ ಪರಮಾವಧಿಯನ್ನು ತಲುಪಿದೆ ಎಂದು ಕಿಡಿಕಾರಿದೆ.

By admin

Leave a Reply

Your email address will not be published. Required fields are marked *

error: Content is protected !!