ಉಡುಪಿ: ಉಡುಪಿ ನಗರ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕ ಪ್ರಮೋದ್ ಕುಮಾರ್ ಮಲ್ಪೆ ಕರಾವಳಿ ಕಾವಲು ಪೊಲೀಸ್ ಠಾಣಾ ನಿರೀಕ್ಷಕರಾಗಿ ವರ್ಗಾವಣೆಗೊಳಿಸಿ ಸರಕಾರ ಆದೇಶ ಹೊರಡಿಸಿದೆ.
ಕಳೆದ ಎರಡು ವರ್ಷಗಳಿಂದ ಉಡುಪಿ ನಗರವನ್ನು ಶಾಂತವಾಗಿರಿಸಿ ಮಾದರಿಯಾಗಿರುವ ಪ್ರಮೋದ್ ಕುಮಾರ್ ವರ್ಗಾವಣೆ ಹಲವರಿಗೆ ಬೇಸರ ತರಿಸಿದೆ.
ಅಪರಾಧಿ ಅಪರಾಧವನ್ನು ಮಾಡುವ ಮೊದಲು ಸಾವಿರ ಸಲ ಯೋಚಿಸುವ ವಾತಾವರಣವನ್ನು ಪ್ರಮೋದ್ ಅವರು ತನ್ನ ಠಾಣಾ ವ್ಯಾಪ್ತಿಯಲ್ಲಿ ನಿರ್ಮಾಣ ಮಾಡುವಲ್ಲಿ ಯಶಸ್ವಿಯಾಗಿದ್ದರು.
ಅಲ್ಲದೆ ಉಡುಪಿ ನಗರದಲ್ಲಿ ಅಕ್ರಮ ಚಟುವಟಿಕೆ ಮಾಡುವವರಿಗೆ, ರೌಡಿಗಳಿಗೆ ಸಿಂಹ ಸ್ವಪ್ನವಾಗಿದ್ದರು. ಲಂಚ ವಿರೋಧಿಯಾಗಿದ್ದ ಇವರು ಎಲ್ಲರಿಗೂ ಮೆಚ್ಚುಗೆಯಾಗಿದ್ದರು.
ಕರಾವಳಿ ಕಾವಲು ಪೊಲೀಸ್ ನಿರೀಕ್ಷಕ ಮಂಜಪ್ಪ ಡಿ.ರಾಮಕೊಂಡಾಡಿ ಉಡುಪಿ ನಗರ ಪೊಲೀಸ್ ಠಾಣಾ ನಿರೀಕ್ಷಕರಾಗಿ, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ನಿರೀಕ್ಷಕ ನಾಗರಾಜ್ ಟಿ.ಡಿ. ಕಾರ್ಕಳ ವೃತ್ತ ಪೊಲೀಸ್ ನಿರೀಕ್ಷಕರಾಗಿ ಹಾಗೂ ಕಾರ್ಕಳ ವೃತ್ತ ನಿರೀಕ್ಷಕ ಸಂಪತ್ ಕುಮಾರ್ ಎ. ಕರಾವಳಿ ಕಾವಲು ಪೊಲೀಸ್ ನಿರೀಕ್ಷಕರಾಗಿ ವರ್ಗಾವಣೆಗೊಂಡಿದ್ದಾರೆ.