ಮಂಗಳೂರಿನ ಕಂಕನಾಡಿಯ ಸುಲ್ತಾನ್ ಗೋಲ್ಡ್ ಜುವೆಲ್ಲರಿಯಲ್ಲಿ ಅನ್ಯಕೊಮಿನ ಜೋಡಿ ಪತ್ತೆಯಾಗಿದ್ದು, ಬಜರಂಗದಳದ ಕಾರ್ಯಕರ್ತರು ದಾಳಿ ನಡೆಸಿದ್ದಾರೆ. ಜ್ಯುವೆಲ್ಲರಿಯಲ್ಲಿ ಉದ್ಯೋಗಿಗಳಾಗಿರುವ ಹಿಂದೂ ಯುವತಿ ಮತ್ತು ಮುಸ್ಲಿಂ ಯುವಕ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಸದ್ಯ ಯುವತಿ ಮನೆಯವರು ಆಗಮಿಸಿ ಯುವಕನನ್ನು ತರಾಟೆಗೆತ್ತಿಕೊಂಡಿದ್ದಾರೆ.
ಕಂಕನಾಡಿ ಸುಲ್ತಾನ್ ಗೊಲ್ಡ್ ಜುವೆಲ್ಲರಿಗೆ ನುಗ್ಗಿದ ಹಿಂದೂ ಸಂಘಟನೆ ಕಾರ್ಯಕರ್ತರು, ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ ಎನ್ನಲಾಗಿದೆ.