ಮಂಗಳೂರು: ನಗರದ ಆಭರಣ ಮಳಿಗೆಯೊಂದರಲ್ಲಿ ಕೆಲಸಕ್ಕಿದ್ದ ಅನ್ಯ ಕೋಮಿನ ಯುವಕ ಮತ್ತು ಯುವತಿ ಪರಸ್ಪರ ಸಲುಗೆಯಿಂದ ವರ್ತಿಸುತ್ತಿದ್ದಾರೆಂಬ ಆರೋಪದಲ್ಲಿ ಸಂಘಟನೆಯೊಂದರ ಕಾರ್ಯಕರ್ತರು ಮಳಿಗೆಗೆ ನುಗ್ಗಿ ಬೆದರಿಸಿದ ಘಟನೆ ಮಂಗಳವಾರ ಸಂಭವಿಸಿದೆ. ಶೃಂಗೇರಿ ಮೂಲದ ಯುವತಿ ಮತ್ತು ಬಂಟ್ವಾಳದ ಯುವಕ ಜತೆಯಾಗಿ ಕೆಲಸ ಮಾಡುತ್ತಿದ್ದರು. ಇವರಿಬ್ಬರು ಸಲುಗೆಯಿಂದ ಇರುವುದನ್ನು ಸಂಘಟನೆ ಕಾರ್ಯಕರ್ತರು ಗಮನಿಸುತ್ತಿದ್ದರು ಮಂಗಳವಾರ ಸಂಘಟನೆ ಕಾರ್ಯಕರ್ತರು ಯುವತಿಯ ತಾಯಿಯ ಜತೆ ಬಂದು ಯುವಕನನ್ನು ತರಾಟೆಗೆ ತೆಗೆದುಕೊಂಡರು ಎಂದು ತಿಳಿದುಬಂದಿದೆ.

ಘಟನೆ ನಡೆದ ಕೂಡಲೇ ಪೊಲೀಸರು ಸ್ಥಳಕ್ಕೆ ಆಗಮಿಸಿ ಯುವಕ ಯುವತಿಯರನ್ನು ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಿದ್ದಾರೆ. ಘಟನೆಯ ಬಗ್ಗೆ ಮೂರು ಪ್ರಕರಣಗಳು ದಾಖಲಾಗಿವೆ. ತನಗೆ ಹಲ್ಲೆ ನಡೆಸಿದ ಬಗ್ಗೆ ಯುವಕ ದೂರು ನೀಡಿದ್ದಾನೆ. ತನ್ನ ಮಗಳಿಗೆ ಯುವಕ ನಿಂದಿಸಿ ಬೆದರಿಕೆ ಹಾಕಿ ಕಿರುಕುಳ ನೀಡಿರುವ ಬಗ್ಗೆ ಯುವತಿಯ ತಾಯಿ ದೂರು ನೀಡಿದ್ದಾರೆ. ಅಕ್ರಮ ಪ್ರವೇಶ ಮಾಡಿ ಗಲಾಟೆ ನಡೆಸಿದ ಬಗ್ಗೆ ಮಳಿಗೆಯವರು ದೂರು ನೀಡಿದ್ದಾರೆ.

By admin

Leave a Reply

Your email address will not be published. Required fields are marked *

error: Content is protected !!