ಕಾಸರಗೋಡು, ಖಾಸಗಿ ಬಸ್ಸು ಡಿಕ್ಕಿ ಹೊಡೆದು ಮಗು ಮೃತಪಟ್ಟ ಘಟನೆ ಚೆರ್ಕಳದಲ್ಲಿ ಶನಿವಾರ ಸಂಜೆ ನಡೆದಿದೆ.

ಸೀತಾಂಗೋಳಿಯ ಆಶಿಕ್ ಮತ್ತು ಸುಬೈದಾ ದಂಪತಿ ಪುತ್ರ ಅಬ್ದುಲ್ ವಾಹಿದ್ (3) ಮೃತಪಟ್ಟಿದ್ದು, ಮಗುವಿನ ಜೊತೆಗಿದ್ದ ತಾಯಿ ಸುಬೈದಾ ಗಾಯ ಗೊಂಡಿದ್ದಾರೆ.

ಚೆರ್ಕಳ ಬಸ್ಸು ನಿಲ್ದಾಣದಲ್ಲಿ ಬಸ್ಸು ಹಿಂದಕ್ಕೆ ತೆಗೆಯುತ್ತಿದ್ದಾಗ ಈ ಘಟನೆ ನಡೆದಿದೆ. ತಾಯಿ ಜೊತೆ ನಡೆದು ಕೊಂಡು ಹೋಗುತ್ತಿದ್ದಾಗ ಈ ದುರ್ಘಟನೆ ನಡೆದಿದೆ.

ಗಂಭೀರ ಗಾಯಗೊಂಡ ಮಗುವನ್ನು ಆಸ್ಪತ್ರೆಗೆ ತಲಪಿಸಿದರೂ ಆಗಲೇ ಮೃತಪಟ್ಟಿದ್ದನು. ಮೃತ ದೇಹವನ್ನು ಕಾಸರಗೊಡು ಜನರಲ್ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದ್ದು, ಮರಣೋತ್ತರ ಪರೀಕ್ಷೆ ಬಳಿಕ ಸಂಬಂಧಿಕರಿಗೆ ಬಿಟ್ಟು ಕೊಡಲಿದೆ.

By admin

Leave a Reply

Your email address will not be published. Required fields are marked *

error: Content is protected !!