ಮಂಗಳೂರು : ನಗರ ಹೊರವಲಯದ ಕೊಲ್ಯ ಎಂಬಲ್ಲಿ ಭೀಕರ ಕಾರು ಅಪಘಾತಕ್ಕೆ ನಾಲ್ಕು ಮಂದಿ ಪ್ರಯಾಣಿಕರು ಗಂಭೀರ ಗಾಯಗೊಂಡ ಘಟನೆ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 66 ರ ವಿಭಜಗಕ್ಕೆ ಕಾರು ಢಿಕ್ಕಿ ಹೊಡೆದು ಈ ಅವಘಡ ಸಂಭವಿಸಿದೆ. ಕಾರಿನಲ್ಲಿದ್ದ ನಾಲ್ವರು ಪ್ರಯಾಣಿಕರಿಗೆ ಗಂಭೀರವಾದ ಗಾಯಗಳಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಗಾಯಾಳುಗಳನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತದಲ್ಲಿ ಗಂಭೀರ ಸ್ವರೂಪದ ಗಾಯಗಳಾದರೂ ಕೂಡಾ ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯಲು ಆಂಬುಲೆನ್ಸ್ ಕೊರತೆಯಾಗಿತ್ತು ಎನ್ನುವಂತಹ ಆರೋಪ ಕೇಳಿ ಬಂದಿದ್ದು. ಈ ವಿಚಾರವಾಗಿ ಸ್ಥಳದಲ್ಲಿ ಜಮಾಯಿಸಿದ್ದ ಸ್ಥಳೀಯರು ಪೊಲೀಸರನ್ನು ತರಾಟೆಗೆತ್ತಿಕೊಂಡರು. ಅಲ್ಲದೆ, ಅಪಘಾತ ನಡೆದ ಭಾಗದಲ್ಲಿ ಬ್ಯಾರಿಕೇಡ್ ಅಳವಡಿಸಲು ಕೂಡಾ ಸ್ಥಳೀಯರು ಇದೇ ವೇಳೆ ಆಗ್ರಹಿಸಿದ್ದಾರೆ.

By admin

Leave a Reply

Your email address will not be published. Required fields are marked *

error: Content is protected !!