ತುಳು ಚಿತ್ರರಂಗ ರಂಗಭೂಮಿ ಹಾಸ್ಯನಟ ಅರವಿಂದ್ ಬೋಳಾರ್ರವರ ವಾಹನ ಸ್ಕಿಡ್ ಆಗಿ ಅಪಘಾತಕ್ಕೊಳಗಾದ ಘಟನೆ ಮಂಗಳೂರು ಪಂಪ್ವೆಲ್ ಬಳಿ ನಡೆದಿದೆ.
ತುಳುನಾಡ ಮಾಣಿಕ್ಯ ಖ್ಯಾತಿಯ ಹಾಸ್ಯ ನಟ ಅರವಿಂದ್ ಬೋಳಾರ್ ಅವರು ಚಲಾಯಿಸುತ್ತಿದ್ದ ಆಕ್ಟೀವಾ ಹೊಂಡಾ ಸ್ಕಿಡ್ ಹೊಡೆದು ಅಪಘಾತಕ್ಕೊಳಗಾಗಿದೆ. ಕಾಲಿಗೆ ಗಾಯವಾದ ಬೋಳಾರ್ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಾಗಿದೆ. ಕಾಲಿಗೆ ಚಿಕಿತ್ಸೆ ನೀಡಲಾಗಿದ್ದು, ವೈದ್ಯರು ನಿಗಾವಹಿಸಿದ್ದಾರೆ. ಸದ್ಯ ಯಾವುದೇ ಅಪಾಯವಿಲ್ಲ ಎಂದು ತಿಳಿದು ಬಂದಿದೆ.