ಮಂಗಳೂರು, ಜ.30: ರಾಜಕೀಯ ಲಾಭ, ವ್ಯಾಪಾರಕ್ಕಾಗಿ ಪ್ರಚೋದನಕಾರಿ ಹೇಳಿಕೆ ನೀಡಿ ಸಮಾಜದಲ್ಲಿ ಅವಿಶ್ವಾಸ, ದ್ವೇಷ, ಕೊಲೆ, ಅಹಿತಕರ ಘಟನೆಗಳಿಗೆ ಕಾರಣರಾಗುವ ಕಿಡಿಗೇಡಿಗಳನ್ನು ಗಡಿಪಾರು ಮಾಡಲು ಇಲ್ಲಿನ ಪೊಲೀಸರು ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ. ಅಂತಹವರು ಸಮಾಜಕ್ಕೆ ಅಪಾಯಕಾರಿ ಎಂದು ಶಾಸಕ ಹಾಗೂ ವಿಧಾನಸಭಾ ಸಭಾ ವಿಪಕ್ಷ ನಾಯಕ ಯು.ಟಿ.ಖಾದರ್ ತಿಳಿಸಿದ್ದಾರೆ.

ವಿಎಚ್ ಪಿ ಮುಖಂಡ ಶರಣ್ ಪಂಪ್ ವೆಲ್ ತುಮಕೂರಿನಲ್ಲಿ ಬಹಿರಂಗವಾಗಿ ನೀಡಿರುವ ಪ್ರಚೋದನಾಕಾರಿ ಹೇಳಿಕೆ ಸಂಬಂಧಿಸಿದಂತೆ ಮಾಧ್ಯಮಗೋಷ್ಠಿಯಲ್ಲಿಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ, ಈ ರೀತಿ ಹೇಳಿಕೆ ನೀಡುವ ಯಾರೇ ವ್ಯಕ್ತಿಯಾಗಿದ್ದರೂ ಅವರ ವಿರುದ್ಧ ಸೂಕ್ತ ಕ್ರಮ ಅಗತ್ಯವಿದೆ ಎಂದರು.

ಸುರತ್ಕಲ್ ನ ಫಾಝಿಲ್ ಪ್ರಕರಣದ ಬಗ್ಗೆ ಶರಣ್ ಪಂಪ್ ವೆಲ್ ನೀಡಿರುವ ಹೇಳಿಕೆಯ ನ್ನು ಗಮನಿಸಿದರೆ ಈ ಪ್ರಕರಣದ ಮರು ತನಿಖೆ ಅಗತ್ಯವಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಈ ರೀತಿ ರಾಜ್ಯದಲ್ಲಿ ನಡೆದ ಎಲ್ಲಾ ಪ್ರಕರಣಗಳ ಮರು ತನಿಖೆ ನಡೆಸಲಾಗುವುದು ಎಂದು ಯು.ಟಿ.ಖಾದರ್ ತಿಳಿದರು.

By admin

Leave a Reply

Your email address will not be published. Required fields are marked *

error: Content is protected !!