ಮಂಗಳೂರು, ಅತಿಯಾಗಿ ಮೊಬೈಲ್ ಬಳಕೆಗೆ ಸಂಬಂಧಿಸಿದಂತೆ ಪೋಷಕರು ಮಗನನ್ನು ಗದರಿಸಿದ ಹಿನ್ನೆಲೆ ಬಾಲಕ ನೇಣು ಬಿಗಿದುಕೊಂಡು ಆತ್ಕಹತ್ಯೆ ಮಾಡಿಕೊಂಡ ಘಟನೆ ನಗರದ ಪದವು ಗ್ರಾಮದ ಕೋಟಿಮುರ ಎಂಬಲ್ಲಿ ನಡೆದಿದೆ.
ಕೋಟಿಮುರ ನಿವಾಸಿ ಜಗದೀಶ್ ಎಂಬವರ ಪುತ್ರ ಜ್ಞಾನೇಶ್(14) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಈತ ನಗರದ ಕುಲಶೇಖರ ಸೇಕ್ರೆಡ್ ಹಾರ್ಟ್ ಶಾಲೆಯ ವಿದ್ಯಾರ್ಥಿಯಾಗಿದ್ದ.
ಕಂಕನಾಡಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಪದವು ಬಿ ಗ್ರಾಮದ ಕೋಟಿಮುರದಲ್ಲಿರುವ ರೆಡ್ ಬ್ರಿಕ್ಸ್ ಅಪಾರ್ಟ್ಮೆಂಟ್ ನಲ್ಲಿ ಜಗದೀಶ್ ಹಾಗೂ ವಿನಯ ದಂಪತಿಗಳ ಮಗನಾದ ಜ್ಞಾನೇಶ್ ಎಂಬಾತ ಬಾಲಕನು ತುಂಟನಾಗಿದ್ದು ಮೊಬೈಲ್ ಬಳಸುವ ವಿಚಾರವಾಗಿ ಮನೆಯಲ್ಲಿ ತಾಯಿ ಸ್ವಲ್ಪ ಗದರಿಸಿದರು. ಈ ಕಾರಣಕ್ಕೆ ಬೇಸರದಲ್ಲಿದ್ದು ನಂತರ ತಾನು ಸ್ನಾನ ಮಾಡಿ ಬರುವುದಾಗಿ ಹೇಳಿ ರೂಮಿನೊಳಗೆ ಹೋಗಿದ್ದ. ಆದರೆ ತುಂಬಾ ಹೊತ್ತಾದರೂ ಬಾರದಿದ್ದಾಗ ತಂದೆ ಜಗದೀಶ್ ರವರು ಬಾತ್ರೂಮ್ ಬಳಿಯಿರುವ ಕಿಟಕಿಯ ಮೂಲಕ ನೋಡಿದಾಗ ಬಾಲಕನು ಸೀಲಿಂಗ್ ಫ್ಯಾನ್ ಗೆ ನೇಣು ಬಿಗಿದುಕೊಂಡು ಇರುವುದು ಪತ್ತೆಯಾಗಿದೆ.