ಸಾಲದ ಕಂತು ತೀರಿಸಲಾಗದೆ  ಬ್ಯಾಂಕ್ ಗೆ ನುಗ್ಗಿದ ವ್ಯಕ್ತಿಯೊಬ್ಬ ಪೆಟ್ರೊಲ್ ಚೆಲ್ಲಿ ಬ್ಯಾಂಕ್ ಗೆ ಬೆಂಕಿಹಚ್ಚಲು ಯತ್ನಿಸಿದಲ್ಲದೆ ತಾನೂ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿರುವ ಘಟನೆ ಸುಳ್ಯದಿಂದ ವರದಿಯಾಗಿದೆ.

ಸುಳ್ಯದ ರಥಬೀದಿಯಲ್ಲಿರುವ ಸರಸ್ವತಿ ಬ್ಯಾಂಕ್ ಗೆ ನುಗ್ಗಿದ ಸ್ಥಳೀಯ ಪೂರಿ ಅಂಗಡಿ ನಡೆಸುತ್ತಿದ್ದ ಶಿವಣ್ಣಗೌಡ ಎಂಬವರು ಈ ರೀತಿ ಮಾಡಲು ಯತ್ನಿಸಿರುವ ವ್ಯಕ್ತಿ. ಅವರು ಫೆ.20 ರಂದು ರಥಭೀದಿಯ ಸರಸ್ವತಿ ಸೌಹಾರ್ಧ ಬ್ಯಾಂಕ್ ಗೆ 10 ಗಂಟೆ ಸುಮಾರಿಗೆ ನುಗ್ಗಿದ್ದು ತಾನು ಪಡೆದಿರುವ ಸಾಲದ ಕಂತಿನ ವಿವರದಲ್ಲಿ ಮಾತುಕಥೆ ನಡೆಸುತ್ತಾ ತಾನು ತಂದಿರುವ ಪೆಟ್ರೋಲ್ ಕ್ಯಾನ್ ನಿಂದ ಪೆಟ್ರೋಲ್ ಚೆಲ್ಲಿ ಈಗಲೇ ‌ಬೆಂಕಿ ಹಚ್ಚುವುದಾಗಿ ಬೆದರಿಕೆ ಹಾಕಿದಲ್ಲದೆ, ನೋಡ ನೋಡುತ್ತಿದ್ದಂತೆ ಪೆಟ್ರೋಲ್ ಚೆಲ್ಲಿ ಸಿಗಾರ್ ಲೈಟರ್ ನಿಂದ ಬೆಂಕಿ ಹಚ್ಚಲು ಯತ್ನಿಸಿದ್ದಾನೆ ಕೂಡಲೇ ಬ್ಯಾಂಕಿನ ಸಿಬ್ಬಂದಿಗಳು ಆತನನ್ನು ತಡೆದು ಪೋಲಿಸರಿಗೆ ದೂರವಾಣಿಯಲ್ಲಿ ಸಂಪರ್ಕಿಸಿದ್ದಾರೆ.

ಪೋಲಿಸರು ಸ್ಥಳಕ್ಕೆ ಧಾವಿಸಿ ಶಿವಣ್ಣ ಗೌಡ ಮತ್ತು ಆತನ ಸ್ಕೂಟರ್ ಸಮೇತ ಠಾಣೆಗೆ ಹೊತ್ತೊಯ್ದಿದ್ದಾರೆ, ಶಿವಣ್ಣ ಗೌಡ ಆಸ್ತಿ ಖರೀದಿಗೆ
ಸರಸ್ವತಿ ಬ್ಯಾಂಕಿನಿಂದ ಸಾಲವನ್ನು ಪಡೆದಿದ್ದರು. ಹಲವು ಕಂತು ಬಾಕಿಯಾಗಿದ್ದು, ಆಸ್ತಿ ಮುಟ್ಟುಗೋಲು ಹಾಕಲು ತಯಾರಿಯಾಗಿತ್ತು. ಇದರಿಂದ ಬೇಸತ್ತ ಅವರು ಈ ಕೃತ್ಯಕ್ಕೆ ಯತ್ನಿಸಿದ್ದಾರೆ, ಒಟ್ಟಿನಲ್ಲಿ ಸರಸ್ವತಿ ಬ್ಯಾಂಕ್ ಸುಳ್ಯ ಶಾಖೆಯ ಸಿಬ್ಬಂದಿಗಳ ಸಮಯ ಪ್ರಜ್ಞೆಯಿಂದ ಸಂಭಾವ್ಯ ಭಾರೀ ಅನಾಹುತ ತಪ್ಪಿದಂತಾಗಿದೆ.

By admin

Leave a Reply

Your email address will not be published. Required fields are marked *

error: Content is protected !!