ಬೆಂಗಳೂರು: ದಾವಣಗೆರೆಯ ಚನ್ನಗಿರಿ ಬಿಜೆಪಿ ಶಾಸಕ ಮಾಡಾಳ್ ವಿರುಪಾಕ್ಷಪ್ಪಗೆ (Madal Virupakshappa) ಪುತ್ರನ ದುಡ್ಡಿನ ಗಂಟು ಸಂಕಷ್ಟ ತಂದಿಟ್ಟಿದೆ. ಮಾಡಾಳ್ ವಿರುಪಾಕ್ಷಪ್ಪ ಅವರು ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆ (ಕೆಎಸ್ಡಿಎಲ್) ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪುತ್ರ ಮಾಡಾಳ್ ಪ್ರಶಾಂತ್ ಬಂಧನ ನಂತರ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಸಿಎಂ ಸೂಚನೆ ನೀಡಿದ್ದರು. ಅದರಂತೆ ವಿರುಪಾಕ್ಷಪ್ಪ ತಮ್ಮ ಆಪ್ತರ ಮೂಲಕ ಸಿಎಂ ಕಚೇರಿಗೆ ರಾಜೀನಾಮೆ ಪತ್ರ ರವಾನಿಸಿದ್ದಾರೆ.

ಲೋಕಾಯುಕ್ತ ದಾಳಿಗೂ ನನಗೂ ಯಾವುದೇ ಸಂಬಂಧ ಇಲ್ಲ. ನನ್ನ ಮತ್ತು ನನ್ನ ಕುಟುಂಬದ ಮೇಲೆ ಷಡ್ಯಂತ್ರ ನಡೆಸಲಾಗಿದೆ. ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡುತ್ತಿದ್ದೇನೆ ಎಂದು ರಾಜೀನಾಮೆ ಪತ್ರದ;ಲ್ಲಿ ಉಲ್ಲೇಖಿಸಿದ್ದಾರೆ. ರಾಜೀನಾಮೆ ಪತ್ರವನ್ನು ತಮ್ಮ ಆಪ್ತರೊಂದಿಗೆ ಸಿಎಂ ಕಚೇರಿ ರವಾನಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪನವರ ಆಪ್ತರಾಗಿರುವ ಶಾಸಕ ಮಾಡಾಳ್ ವಿರುಪಾಕ್ಷಪ್ಪ ಅವರಿಗೆ ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆ (ಕೆಎಸ್​ಡಿಎಲ್)​ ನಿಗಮ ಮಂಡಳಿ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿತ್ತು. ಆದ್ರೆ, ಇದೀಗ ಅವರ ಪುತ್ರ ಲೋಕಾಯುಕ್ತ ಬಲೆಗೆ ಬಿದ್ದಿದ್ದು, ಈ ಮುಜುಗರರಿಂದ ತಪ್ಪಿಸಿಕೊಳ್ಳಲು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನಿಡುವಂತೆ ಸಿಎಂ ಸೂಚನೆ ರವಾನಿಸಿದ್ದರು,

By admin

Leave a Reply

Your email address will not be published. Required fields are marked *

error: Content is protected !!