ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಪಾಂಡೇಶ್ವರ ಠಾಣೆಯ ಹೆಡ್‌ಕಾನ್‌ಸ್ಟೆಬಲ್‌ ಶ್ರೀಲತಾ ಅವರನ್ನು ಪೊಲೀಸ್‌ ಆಯುಕ್ತರು ಅಮಾನತುಗೊಳಿಸಿರುವುದಾಗಿ ವರದಿಯಾಗಿದೆ.

ನಗರದ ಕ್ಲಾಕ್‌ ಟವರ್‌ ಬಳಿ ಹೊಯ್ಸಳ ವಾಹನದಲ್ಲಿ ಕರ್ತವ್ಯದಲ್ಲಿದ್ದ ಶ್ರೀಲತಾ ಅಲ್ಲಿಂದ ಖಾಸಗಿ ವಾಹನದಲ್ಲಿ ತೆರಳಿ ಕರ್ತವ್ಯ ಲೋಪವೆಸಗಿದ್ದರು.

ಇನ್ನು ಈ ಬಗ್ಗೆ ಫೆ. 23ರಂದು ದೂರು ಬಂದಿದ್ದು, ಈ ಬಗ್ಗೆ ವರದಿ ಪಡೆದುಕೊಳ್ಳಲಾಗಿದ್ದು, ಫೆ. 28ರಂದು ಆಕೆಯನ್ನು ಕರ್ತವ್ಯದಿಂದ ಅಮಾನತುಗೊಳಿಸಿ ಇಲಾಖಾ ವಿಚಾರಣೆ ಆರಂಭಿಸಲಾಗಿದೆ ಎಂದು ಡಿಸಿಪಿ ಅಂಶುಕುಮಾರ್‌ ಮಾಹಿತಿ ನೀಡಿದ್ದಾರೆ.

By admin

Leave a Reply

Your email address will not be published. Required fields are marked *

error: Content is protected !!