ಮಂಗಳೂರು, ನಗರದಲ್ಲಿ ಕಳೆದ ನವೆಂಬರ್‌ನಲ್ಲಿ ನಡೆದ ಕುಕ್ಕರ್‍ ಬಾಂಬ್ ಸ್ಪೋಟ ಪ್ರಕರಣದ ಹೊಣೆಯನ್ನು ಐಸಿಸ್ ಉಗ್ರ ಸಂಘಟನೆ ಹೊತ್ತುಕೊಂಡಿದೆ.
ಮಂಗಳೂರಿನಲ್ಲಿ ಕಳೆದ ವರ್ಷ ನವೆಂಬರ್‌ನಲ್ಲಿ ನಡೆದ ಕುಕ್ಕರ್‍ ಬಾಂಬ್ ಸ್ಪೋಟ ಹಾಗೂ ತಮಿಳುನಾಡಿನ ಕೊಯಂಬತ್ತೂರಿನಲ್ಲಿ ನಡೆದ ಸ್ಪೋಟ ಸೇರಿ ಎರಡೂ ಪ್ರಕರಣದ ಹೊಣೆಯನ್ನು ಐಸಿಸ್ ಉಗ್ರ ಸಂಘಟನೆ ಹೊತ್ತುಕೊಂಡಿದೆ. ಇಸ್ಲಾಮಿಕ್ ಸ್ಟೇಟ್ ವಿಲಾಯಾ ಖೋರಾಸಾನ್ ತನ್ನ ವಾಯ್ಸ್ ಆಫ್ ಖೋರಾಸಾನ್ ನಿಯತಕಾಲಿಕೆಯ 23ನೇ ಸಂಚಿಕೆಯಲ್ಲಿ ಈ ಬಗ್ಗೆ ಹೇಳಿಕೊಂಡಿದೆ ಎಂದು ಸುದ್ದಿಸಂಸ್ಥೆಯೊಂದು ವರದಿ ಮಾಡಿದೆ.

ಈ ಹಿಂದೆ ಕುಕ್ಕರ್‍ ಬಾಂಬ್ ಸ್ಪೋಟ ಕೃತ್ಯ ಎಸಗಿರುವುದು ತಾನೇ ಎಂಬುದಾಗಿ ಇಸ್ಲಾಮಿಕ್ ರೆಸಿಸ್ಟೆನ್ಸ್ ಕೌನ್ಸಿಲ್ ಎಂಬ ಉಗ್ರ ಸಂಘಟನೆಯೊಂದು ಹೇಳಿಕೊಂಡಿತ್ತು. ಅಲ್ಲದೆ ಕದ್ರಿ ದೇವಳ ತನ್ನ ಟಾರ್ಗೆಟ್ ಆಗಿತ್ತು ಎಂದೂ ಹೇಳಿಕೊಂಡಿತ್ತು. ಆದರೆ ಇದೀಗ ಕುಕ್ಕರ್‍ ಬಾಂಬ್ ಸ್ಪೋಟದ ಹೊಣೆಯನ್ನು ಐಸಿಸ್ ಹೊತ್ತುಕೊಂಡಿದೆ ಎಂದು ವರದಿಯಾಗಿದೆ.
ಕುಕ್ಕರ್‍ ಬಾಂಬ್ ಸ್ಪೋಟದ ಆರೋಪಿ ಉಗ್ರ ಶಾಕೀರ್‍ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ. ಈತನೊಂದಿಗೆ ಸಂಬಂಧ ಹೊಂದಿದ್ದ ಆರೋಪದಲ್ಲಿ ನಗರದ ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬನನ್ನೂ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು. ಇನ್ನು ಇದೊಂದು ಭಯೋತ್ಪಾದನಾ ಕೃತ್ಯವೇ ಹೊರತು ಆಕಸ್ಮಿಕ ಸ್ಪೋಟವಲ್ಲ ಎಂಬುದಾಗಿ ರಾಜ್ಯದ ಪೊಲೀಸ್‌ ಮಹಾನಿರ್ದೇಶಕ ಪ್ರವೀಣ್‌ ಸೂದ್‌ ಹೇಳಿದ್ದರು.

By admin

Leave a Reply

Your email address will not be published. Required fields are marked *

error: Content is protected !!