ಆಟವಾಡಲು ಮನೆಯಿಂದ ಹೊರಗೆ ಹೋಗಿದ್ದ ಹೈಯರ್ ಸೆಕೆಂಡರಿ ಶಾಲೆಯ ವಿದ್ಯಾರ್ಥಿಯೋರ್ವ ಶಾಲೆಯ ಸಮೀಪ ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಡೆದಿದೆ.

ಕುಂಡಂಗುಳಿ ನಿವಾಸಿ ವಿನೋದ್ – ಶಾಲಿನಿ ದಂಪತಿಗಳ ಪುತ್ರ ಅಭಿನವ್ (17) ನಿಗೂಢವಾಗಿ ಸಾವನ್ನಪ್ಪಿದ ಪ್ಲಸ್ ವನ್ ಹೈಯರ್ ಸೆಕೆಂಡರಿ ವಿದ್ಯಾರ್ಥಿಯಾಗಿದ್ದಾನೆ.

ಮಾರ್ಚ್ 7 ರಂದು ಅಭಿನವ್ ತರಗತಿ ಮುಗಿಸಿ ಸಂಜೆ ಮನೆಗೆ ಬಂದು ಆಟವಾಡಲು ಹೋಗುವುದಾಗಿ ಹೇಳಿದ್ದ. ಸಂಜೆಯಾದರೂ ವಾಪಸ್‌ ಬಾರದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಹುಡುಕಾಟ ನಡೆಸಿದ್ದಾರೆ. ರಾತ್ರಿ 8 ಗಂಟೆ ಸುಮಾರಿಗೆ ಮನೆ ಸಮೀಪದ ಎಲ್‌ಪಿ ಶಾಲೆಯ ಹಿಂದೆ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು ಕೂಡಲೇ ಆಸ್ಪತ್ರೆಗೆ ಕೊಂಡೊಯ್ದರೂ ರಕ್ಷಿಸಲು ಸಾಧ್ಯವಾಗಿಲ್ಲ.

ಬೇಡಡ್ಕ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

By admin

Leave a Reply

Your email address will not be published. Required fields are marked *

error: Content is protected !!