ಮಂಗಳೂರು, ಮೇ 10ರಂದು ವಿಧಾನಸಭೆ ಚುನಾವಣೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಕೆಲವೊಂದು ನಿರ್ಬಂಧಗಳನ್ನು ವಿಧಿಸಲಾಗಿದೆ. ಕಳೆದ ಕೆಲವು ದಿನಗಳಿಂದ ಜನರಿಗೆ ಇರುವ ಕೆಲವು ಪ್ರಶ್ನೆಗಳಿಗೆ ಉತ್ತರ ಸಿಕ್ಕಿದ್ದು, ದ.ಕ ಜಿಲ್ಲೆಯಲ್ಲಿ ಕೋಲ, ಕಂಬಳ ಯಕ್ಷಗಾನಕ್ಕೆ ನಿರ್ಬಂಧ ಇಲ್ಲ ಎಂದು ಜಿಲ್ಲಾಧಿಕಾರಿ ಡಾ. ರವಿಕುಮಾರ್ ಅವರು ಸ್ಪಷ್ಟಪಡಿಸಿದ್ದಾರೆ.

ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ನರು ತಮ್ಮ ಧಾರ್ಮಿಕ ಆಚರಣೆ ನಡೆಸಬಹುದಾಗಿದೆ. ಆದರೆ ಆ ಕಾರ್ಯಕ್ರಮಕ್ಕೆ ಜನಪ್ರತಿನಿಧಿ ಬಂದು ಮತಯಾಚನೆ ನಡೆಸಬಾರದು. ಪಕ್ಷದ ಮುಖಂಡರು, ಕಾರ್ಯಕರ್ತರು ಯಾರಿಗೂ ಮತಯಾಚನೆಗೆ ಅವಕಾಶ ಇಲ್ಲ ಎಂದು ದ.ಕ ಜಿಲ್ಲಾಧಿಕಾರಿ ರವಿ ಕುಮಾರ್ ಎಂ.ಆರ್ ಅವರು ಖಡಕ್ ಸೂಚನೆ ನೀಡಿದ್ದಾರೆ.

By admin

Leave a Reply

Your email address will not be published. Required fields are marked *

error: Content is protected !!