ಸುಳ್ಯ: ವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ ಪಕ್ಷದ ಅಭ್ಯರ್ಥಿಗಳು ಚುನಾವಣಾ ನಿವೃತ್ತಿ ಘೋಷಣೆಯ ತೀರ್ಮಾನದಲ್ಲಿ ಬಿಜೆಪಿ ಪಕ್ಷಕ್ಕೆ ಶಾಕ್ ನೀಡುತ್ತಿದ್ದಾರೆ.

ಬಿಜೆಪಿಯ ಹಿರಿಯ ಮುಖಂಡರು ಈಶ್ವರಪ್ಪ ಸೇರಿದಂತೆ ಕೆಲವು ಮುಖಂಡರುಗಳು ರಾಜಕೀಯ ನಿವೃತ್ತಿ ಘೋಷಣೆ ಮಂಡಿದ ಬೆನ್ನಲ್ಲೇ ಸುಳ್ಯ ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕ, ಸಚಿವ ಎಸ್.ಅಂಗಾರ ರಾಜಕಾರಣದಿಂದ ನಿವೃತ್ತಿ ಘೋಷಿಸಿದ್ದಾರೆ ಎಂದು ತಿಳಿದುಬಂದಿದೆ.

6 ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಅಂಗಾರ ಅವರು ಸೋಲಿಲ್ಲದ ಸರದಾರನಾಗಿ ಮೆರೆಯುತ್ತಿರುವ ಸಂದರ್ಭದಲ್ಲಿ ಅವರಿಗೆ ಟಿಕೆಟ್ ತಪ್ಪಿರುವುದು ಅವರಿಗೆ ತೀವ್ರ ನಿರಾಸೆ ಆಗಿದ್ದು ಇದೇ ಕಾರಣಕ್ಕಾಗಿ ರಾಜಕಾರಣದಿಂದ ನಿವೃತ್ತಿ ಘೋಷಿಸಿದ್ದಾರೆ ಎಂದು ತಿಳಿದುಬಂದಿದೆ.

By admin

Leave a Reply

Your email address will not be published. Required fields are marked *

error: Content is protected !!